Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪ್ರತಿಭಾ ಕಾರಂಜಿಯಲ್ಲಿ ಜಾನಪದ ಗೀತೆ: ರಾಜ್ಯ ಮಟ್ಟಕ್ಕೆ ಭಾಗ್ಯಲಕ್ಷ್ಮೀ ಆಯ್ಕೆ

ಪ್ರತಿಭಾ ಕಾರಂಜಿಯಲ್ಲಿ ಜಾನಪದ ಗೀತೆ: ರಾಜ್ಯ ಮಟ್ಟಕ್ಕೆ ಭಾಗ್ಯಲಕ್ಷ್ಮೀ ಆಯ್ಕೆ

ಬೀದರ್: ಬೀದರ್ ಜಿಲ್ಲೆಯ ಔರಾದ್ (ಗ್ರಾಮೀಣ) ತಾಲ್ಲೂಕಿನಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಪ್ರತಿಭೆಯಿಂದ ಶಾಲೆ ಹಾಗೂ ತಾಲ್ಲೂಕಿನ ಕೀರ್ತಿಯನ್ನು ರಾಜ್ಯ ಮಟ್ಟಕ್ಕೆ ತಲುಪಿಸಿದ್ದಾಳೆ. ಬೀದರ್‌ನಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ, ಔರಾದ್ ತಾಲ್ಲೂಕಿನ ಚಿಂತಾಕಿ ಗ್ರಾಮದ ಡಾ. ಡಿ. ಆರ್. ಅಂಬೇಡ್ಕರ್ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಲಕ್ಷ್ಮೀ ಜಾನಪದ ಗೀತೆ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.

ತನ್ನ ಮಧುರ ಕಂಠ ಮತ್ತು ಜಾನಪದ ಸಂಗೀತದ ಸೊಗಡಿನಿಂದ ತೀರ್ಪುಗಾರರ ಮೆಚ್ಚುಗೆ ಪಡೆದ ಭಾಗ್ಯಲಕ್ಷ್ಮೀ, ಈ ಸಾಧನೆಯ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಈ ಸಾಧನೆಯಿಂದ ಶಾಲೆಯ ಗೌರವ ಹೆಚ್ಚಾಗಿದ್ದು, ಶಿಕ್ಷಕರು, ಸಹಪಾಠಿಗಳು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಭಾಗ್ಯಲಕ್ಷ್ಮೀ ಅವರ ಈ ಯಶಸ್ಸಿಗೆ ಶಾಲೆಯ ಮುಖ್ಯೋಪಾಧ್ಯಾಯರು, ಸಂಗೀತ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಶ್ರಮ ಮತ್ತು ಮಾರ್ಗದರ್ಶನ ಕಾರಣವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿನಿಯ ಸಾಧನೆ ಮುಂದಿನ ಹಂತದಲ್ಲೂ ಇನ್ನಷ್ಟು ಯಶಸ್ಸು ತರುವ ನಿರೀಕ್ಷೆಯಿದೆ ಎಂದು ಶುಭ ಹಾರೈಸಿದರು.

ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗ್ಯಲಕ್ಷ್ಮೀ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಯ ಹೆಸರು ಮತ್ತಷ್ಟು ಎತ್ತಿ ಹಿಡಿಯಲಿ ಎಂಬುದು ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
2
😢
0
😡
0
👍
8
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading