Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ವಿಶ್ವಕರ್ಮ ಸಹಕಾರ ಬ್ಯಾಂಕ್ ವತಿಯಿಂದ 17ನೇ ‘ಸ್ವಚ್ಛತಾ ಹೀ ಸೇವಾ’ ಶ್ರಮದಾನ ಕಾರ್ಯಕ್ರಮ

ಉಡುಪಿ: ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ. ತನ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ, ಬ್ಯಾಂಕಿನ ಉಡುಪಿ ಶಾಖೆಯ ನೇತೃತ್ವದಲ್ಲಿ ಉಡುಪಿಯ ದೊಡ್ಡಣ್ಣಗುಡ್ಡೆ ಪರಿಸರದಲ್ಲಿ “ಸ್ವಚ್ಛತಾ ಹೀ ಸೇವಾ” ಘೋಷಣೆಯಡಿ ಸ್ವಚ್ಛ ಭಾರತ್ ಅಭಿಯಾನದ 17ನೇ ಶ್ರಮದಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.

ಕಾರ್ಯಕ್ರಮಕ್ಕೆ ವಿಷ್ಣುಮೂರ್ತಿ ಫ್ರೆಂಡ್ಸ್ (ರಿ) ದೊಡ್ಡಣ್ಣಗುಡ್ಡೆ ಇದರ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಇದರ ಸಂಸ್ಥಾಪಕ ಎಂ.ಎನ್. ನಾಯಕ್, ವಿಶ್ವಕರ್ಮ ಸಮಾಜ ಸೇವಾ ಸಂಘ ಸಗ್ರಿ–ಚಕ್ರತೀರ್ಥ ಇದರ ಅಧ್ಯಕ್ಷ ಶ್ರೀಪತಿ ಆಚಾರ್ಯ ಹಾಗೂ ಬ್ಯಾಂಕಿನ ಅಧ್ಯಕ್ಷ ಡಾ. ಎಸ್.ಆರ್. ಹರೀಶ್ ಆಚಾರ್ ಅವರು ಸಂಯುಕ್ತವಾಗಿ ಚಾಲನೆ ನೀಡಿದರು.

ಚಾಲನೆ ನೀಡಿ ಮಾತನಾಡಿದ ರಾಧಾಕೃಷ್ಣ ಶೆಟ್ಟಿ ಅವರು, “ಸ್ವಚ್ಛ ಪರಿಸರವೇ ಉತ್ತಮ ಆರೋಗ್ಯ ಮತ್ತು ಸುಸ್ಥಿರ ಸಮಾಜದ ಮೂಲ. ಸ್ವಚ್ಛತೆಯನ್ನು ಪ್ರತಿಯೊಬ್ಬರೂ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ಕುರಿತು ಜಾಗೃತಿ ಮೂಡಿಸುವ ಮಾನವೀಯ ಹಾಗೂ ಸಾಮಾಜಿಕ ಕಾರ್ಯವನ್ನು ವಿಶ್ವಕರ್ಮ ಬ್ಯಾಂಕ್ ಮಾಡುತ್ತಿರುವುದು ಅದರ ಸಾಮಾಜಿಕ ಬದ್ಧತೆಯನ್ನು ಸ್ಪಷ್ಟಪಡಿಸುತ್ತದೆ” ಎಂದರು. ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಸಂಸ್ಥಾಪಕ ಎಂ.ಎನ್. ನಾಯಕ್ ಅವರು, “ನಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿದ್ದರೆ ಮಾತ್ರ ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ನೀಡಲು ಸಾಧ್ಯ” ಎಂದು ಹೇಳಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಜಗದೀಶ್ ಪಿ. ಆಚಾರ್ಯ, ನಿರ್ದೇಶಕ ಜಗದೀಶ್ ಜೆ. ಆಚಾರ್ಯ, ವಿಷ್ಣುಮೂರ್ತಿ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಸತೀಶ್ ಪುತ್ರನ್ ಸೇರಿದಂತೆ ಪದಾಧಿಕಾರಿಗಳು ಮತ್ತು ಸದಸ್ಯರು, ಜೆಸಿಐ ದೊಡ್ಡಣ್ಣಗುಡ್ಡೆ ಪ್ರಕೃತಿ ಅಧ್ಯಕ್ಷ ಜೆಸಿ ಭರತ್ ಕುಮಾರ್, ಪೂರ್ವ ಅಧ್ಯಕ್ಷ ಮಾಜಿ ಸೈನಿಕ ಜೆಸಿ ಕೇಶವ ಆಚಾರ್ಯ, ಪದಾಧಿಕಾರಿಗಳು ಹಾಗೂ ಸದಸ್ಯರು, ವಿಶ್ವಕರ್ಮ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ವಿಷ್ಣುಮೂರ್ತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ರೀಮತಿ ವಾರಿಜಾ ಮತ್ತು ಪದಾಧಿಕಾರಿಗಳು, ಬ್ಯಾಂಕಿನ ಗ್ರಾಹಕರು ಹಾಗೂ ಸಿಬ್ಬಂದಿಗಳು ಸ್ವಯಂಸೇವಕರಾಗಿ ಶ್ರಮದಾನದಲ್ಲಿ ಭಾಗವಹಿಸಿದರು.

😀
0
😍
0
😢
0
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading

Subscribe