Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟುಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ • 🔥
Advertisement

ಆಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ – ಸುನಿಲ್ ಕುಮಾರ್ ಬಜಾಲ್

ಆಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ – ಸುನಿಲ್ ಕುಮಾರ್ ಬಜಾಲ್

ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿರುವ ಮತ್ತು ಕನ್ನಡದ ಲೇಖಕರೂ ಆಗಿರುವ ನಿತ್ಯಾನಂದ ಬಿ ಶೆಟ್ಟಿಯವರು ಒಂದು ಅದ್ಭುತವಾದ ಪುಸ್ತಕ ಬರೆದಿದ್ದಾರೆ.ಆ ಕೃತಿಯ ಹೆಸರು ಆಳವು ಅರಿಯದ ಭಾಷೆ – ಕಲೆ,ಸಮಾಜ, ಇತಿಹಾಸ. ಒಂದು ಕಾದಂಬರಿಯಂತೆ, ಕುತೂಹಲ ಹುಟ್ಟಿಸುತ್ತ ಓದಿಸಿಕೊಂಡು ಹೋಗುವ ಇಂತಹ ಒಂದು ಸಂಶೋಧನಾ ಕೃತಿ ಕನ್ನಡದಲ್ಲಂತೂ ಪ್ರಾಯಶಃ ಇದೇ ಮೊದಲು. ಓದು-ಬರಹ ಬಲ್ಲ ಸಾಮಾನ್ಯರಿಂದ ತೊಡಗಿ, ಮಹಾನ್ ಪಂಡಿತರನ್ನೂ ಏಕಕಾಲಕ್ಕೆ ಆವರಿಸಬಲ್ಲ ಪುಸ್ತಕ ಇದು.‌ ಈ ಪುಸ್ತಕದ ಪ್ರತಿಯೊಂದು ಪದ, ಪ್ರತಿ ಸಾಲು ಓದುಗರನ್ನು ಹೇಗೆ ಹಿಡಿದಿಡುತ್ತದೆಯೆಂದರೆ ಇದನ್ನು ಒಮ್ಮೆ ಓದಲು ತೊಡಗಿದರೆ ನಾವು ಪುಸ್ತಕದ ಗುಂಗಿನಲ್ಲೇ ಇರುತ್ತೇವೆ.

ಒಂದು ಬೃಹತ್ ಕಾದಂಬರಿಯಾಗುವ, ನಾಟಕವೂ ಆಗುವ, ಸಿನಿಮಾವೂ ಆಗಬಲ್ಲ ಸಮೃದ್ಧವಾದ ವಸ್ತುವನ್ನು ಇದು ಹೊಂದಿದೆ.ಕಲೆ, ಸಮಾಜ ಮತ್ತು ಇತಿಹಾಸದ ಎಲ್ಲಾ ಆಯಾಮಗಳನ್ನು ಒಂದೇ ಕೃತಿಯಲ್ಲಿ ಅಳವಡಿಸುವ ಮೂಲಕ ತನ್ನ ಮೇಧಾವಿತನವನ್ನು ಇಲ್ಲಿ ನಿತ್ಯಾನಂದ ಬಿ ಶೆಟ್ಟಿಯವರು ವಿಶಾಲವಾಗಿ ತೆರೆದಿಟ್ಟಿದ್ದಾರೆ. ಯಾವುದರ ಬಗೆಗೂ ತೀರ್ಮಾನ ಕೊಡದೆ, ಓದುಗರೇ ನಿರ್ಧಾರಕ್ಕೆ ಬರುವಂತೆ ಯಕ್ಷಗಾನವೆಂಬ ವಸ್ತುವನ್ನು ಪ್ರಧಾನವಾಗಿ ಮುಂದಿಟ್ಟು ಅದರ ಸುತ್ತಮುತ್ತಲಿನ ವಿಚಾರಗಳು, ಕಳೆದ 150 ವರ್ಷಗಳಿಂದ ಯಕ್ಷಗಾನ ಬೆಳೆದು ಬಂದ ರೀತಿಯನ್ನು ಕಣ್ಣಿಗೆ ಕಟ್ಟುವಂತೆ ವಿವರಿಸಿರುವುದು ಅತ್ಯಂತ ರೋಮಾಂಚನಕಾರಿಯಾಗಿದೆ.*

ಒಂದು ಕಾಲದಲ್ಲಿ ಬಹಳ ಪ್ರಸಿದ್ಧರಾದ ಕಲಾವಿದರು ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸಮುದಾಯದಿಂದಲೂ ಬಂದಿದ್ದರು ಎಂಬುದನ್ನು ಇಲ್ಲಿ ಓದಿ ತಿಳಿದಾಗಲೇ ಬಹಳ ಆಶ್ಚರ್ಯವಾಯಿತು. ಯಾಕೆಂದರೆ ಅದನ್ನು ಇವತ್ತಿನ ಧರ್ಮ ರಾಜಕಾರಣದ ಸಂಕೀರ್ಣತೆಯಲ್ಲಿ ಊಹೆ ಮಾಡಲು ಕೂಡ ಸಾಧ್ಯವಿಲ್ಲ. ಯಕ್ಷಗಾನದ ಈಗಿನ ವಾತಾವರಣದಲ್ಲಿ ಇನ್ನೊಬ್ಬ ಜಬ್ಬಾರ್ ಸುಮೋನಂತಹ ಕಲಾವಿದ ಹುಟ್ಟಲು ಸಾಧ್ಯವೇ ಎಂಬ ಪ್ರಶ್ನೆಯೂ ಈ ಪುಸ್ತಕವನ್ನು ಓದುವಾಗ ಹುಟ್ಟಿಕೊಳ್ಳುತ್ತದೆ.

ಇಂದು ಯಕ್ಷಗಾನವನ್ನು ಬಿಜೆಪಿ ಪಕ್ಷದ ಪ್ರಚಾರಕ್ಕೆ ಬಳಸಿಕೊಂಡು, ಕೋಮುವಾದಿ ವಿಚಾರಗಳನ್ನು ಪ್ರಸ್ತಾಪಿಸುತ್ತ, ಅಲ್ಪಸಂಖ್ಯಾತರನ್ನು ಅತ್ಯಂತ ತುಚ್ಛವಾಗಿ ಅವಮಾನಿಸುತ್ತಾ, ಜನರಲ್ಲಿ ಮುಸ್ಲಿಂ ದ್ವೇಷ ಹುಟ್ಟುವಂತೆ ಕೋಮುವಾದಿ ಶಕ್ತಿಗಳು ಹೂಡಿದ ರಣತಂತ್ರಗಳನ್ನು ಈ ಪುಸ್ತಕ ಎಳೆಎಳೆಯಾಗಿ ವಿವರಿಸುತ್ತದೆ. ಸೌಹಾರ್ದತೆಯನ್ನು ಸಾರುವ ಕಲೆಯಾಗಿದ್ದ ಯಕ್ಷಗಾನದಲ್ಲಿ ಕೋಮುವಾದಿ ವಿಚಾರಗಳನ್ನು ಮುಂದಿಟ್ಟು ಕಲೆಗೆ ಕಳಂಕವನ್ನುಂಟು ಮಾಡಿದ ಕುಂಬ್ಳೆ ಸುಂದರರಾಯರ ವ್ಯಕ್ತಿತ್ವ, ಬಳಿಕ ಅವರ ಆತ್ಮಕಥೆಯಲ್ಲಿ ಅವರಾಡಿದ ವಿಷಾದದ ಮಾತುಗಳು, ಸಂಘಪರಿವಾರದ use & throw (ಬಳಸು ಮತ್ತು ಬಿಸಾಕು) ಎಂಬ ಕುತಂತ್ರ ಎಲ್ಲವೂ ಇಲ್ಲಿ ಚರ್ಚೆಗೆ, ವಿಶ್ಲೇಷಣೆಗೆ ಒಳಗಾಗಿದೆ. ಸಂಘಪರಿವಾರ ಪ್ರಜ್ಞಾಪೂರ್ವಕವಾಗಿ ಯಕ್ಷಗಾನದಂತಹ ಕಲೆಯಲ್ಲೂ ತನ್ನ ಗುಪ್ತಾ ಅಜೆಂಡಾವನ್ನು ಪಸರಿಸುವ ಮೂಲಕ ಎಷ್ಟೊಂದು ವ್ಯಾಪಕತೆ ಪಡೆದಿದೆ ಎಂಬುದನ್ನು ಇತ್ತೀಚಿನ ಚುನಾವಣೆಯ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲುರವರು ಆಡಿದ ಮಾತುಗಳನ್ನು ಇಲ್ಲಿ ಲೇಖಕರು ಉಲ್ಲೇಖಿಸಿ ಓದುಗರಿಗೆ ಮನದಟ್ಟು ಮಾಡಿಸುತ್ತಾರೆ.

ಇಂತಹ ಅದ್ಭುತ ಕೃತಿಗೆ ಪೂರಕ ಮಾತುಗಳನ್ನು ಆಡಿದ್ದಲ್ಲದೆ ಇದಕ್ಕೆ ಪ್ರತಿಕ್ರಿಯೆ ಬರೆದ 8 ಮಂದಿ ವಿವಿಧ ಕ್ಷೇತ್ರಗಳ ವಿದ್ವಾಂಸರ ವಿಮರ್ಶಾತ್ಮಕ ಮಾತುಗಳು ಈ ಕೃತಿಗೆ ಮತ್ತಷ್ಟು ಶಕ್ತಿಯನ್ನು ತುಂಬಿದೆ‌.ಅದರಲ್ಲೂ ಕವಿ ಮತ್ತು ರಂಗ ನಿರ್ದೇಶಕರಾದ ರಘುನಂದನರವರ ಸವಿವರವಾದ ಜಾಗತಿಕ ವಿಶ್ಲೇಷಣೆಯು ಹಲವು ಆಯಾಮಗಳನ್ನು ವಿವರಿಸುತ್ತಾ, ಯಕ್ಷಗಾನದೊಳಗೆ ಫ್ಯಾಸಿಸಂ ಇಣುಕುವ ಅಪಾಯ,ಅದೇ ಫ್ಯಾಸಿಸಂ ಜಗತ್ತಿನ ವಿದ್ಯಮಾನವನ್ನು ಅಲ್ಲೋಲ ಕಲ್ಲೋಲ ಮಾಡಿದ ಪ್ರಸಂಗಗಳನ್ನು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ. ಪ್ರಸ್ತುತ ಜಗತ್ತಿನಲ್ಲಿ ನಡೆಯುತ್ತಿರುವ ಯುದ್ಧ ಹಾಗೂ ಇಸ್ರೇಲ್ ಪ್ಯಾಲೆಸ್ಟೈನ್ ನ ಮೇಲೆ ನಡೆಸಿರುವ ಭೀಕರ ಧಾಳಿಯ ಭಯಾನಕತೆಯನ್ನು ಬಿಚ್ಚಿಟ್ಟಿದ್ದಾರೆ.

ಒಟ್ಟಿನಲ್ಲಿ ಯಕ್ಷಗಾನವೆಂಬ ಕಲೆ ಈ ಕೃತಿಯ ಪ್ರಧಾನ ವಸ್ತುವಾಗಿದ್ದರೂ, ಅದರಾಚೆಗಿರುವ ಹತ್ತು ಹಲವು ವಿಚಾರಗಳನ್ನು ತರುವ ಮೂಲಕ ಇಡೀ ಪುಸ್ತಕವನ್ನು ಜಾಗತಿಕ ವಿದ್ಯಮಾನಗಳ ಹಿನ್ನೆಲೆಯಲ್ಲಿ ಓದುವಂತೆ ಲೇಖಕರು ಮಾಡಿದ್ದಾರೆ. ಓದುಗರನ್ನು ಆಳವಾಗಿ ಯೋಚಿಸುವಂತೆ ಮಾಡುವ, ಆತ್ಮಾವಲೋಕನ ಮಾಡುವಂತೆ ಪ್ರಚೋದಿಸುವ ಈ ಪುಸ್ತಕದ ಬರಹದ ಶೈಲಿ ಅಪೂರ್ವವಾದುದು.‌ಈ ಪುಸ್ತಕವನ್ನು ಓದಿ ಮುಗಿಸಿದಾಗ ಓದುಗರಲ್ಲಿ ಹುಟ್ಟುವ ಭಾವನೆಗಳನ್ನು ವಿವರಿಸಲು ಸಾಧ್ಯವೇ ಇಲ್ಲ. ಹಾಗೆಯೇ, ಇಲ್ಲಿನ ಹೋರಾಟಗಾರರು ತಾವು ಸಾಗಿಬಂದ ದಾರಿಯನ್ನು ಮತ್ತೊಂದು ಸಲ ಪರಿಶೀಲಿಸುವಂತೆ ಮಾಡಿದ ಒತ್ತಾಯವೂ ಅರ್ಥವಾಗುತ್ತದೆ. ಇಂತಹ ಎಲ್ಲವೂ ಈ ಪುಸ್ತಕದಲ್ಲಿದೆ.ಕರಾವಳಿಯ ಹೆಮ್ಮೆಯ ಚಿಂತಕರೂ ಮತ್ತು ಬರಹಗಾರರೂ ಆದ ನಿತ್ಯಾನಂದ ಬಿ ಶೆಟ್ಟಿಯವರ ಈ ಪರಿಶ್ರಮವನ್ನು ಇಡೀ ಕರ್ನಾಟಕದ ಜನತೆ ಅಭಿನಂದಿಸಬೇಕಾಗಿದೆ.‌

ಸುನಿಲ್ ಕುಮಾರ್ ಬಜಾಲ್

ಇದನ್ನೂ ಓದಿ: ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್

Web Add
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಆರ್. ಧರ್ಮಸೇನಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರ ಒತ್ತಾಯ
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಸಂಶೋಧನಾ ಲೇಖನಗಳಿಗಾಗಿ ಕರೆ: ಸಹ್ಯಾದ್ರಿಯಲ್ಲಿ 3ನೇ IEEE ಅಂತರರಾಷ್ಟ್ರೀಯ ಸಮ್ಮೇಳನ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ ನಿಧನ
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಪೂಜೆ ನೆರವೇರಿಸಿ ಮುಖ್ಯಮಂತ್ರಿ ಕುರ್ಚಿಯಲ್ಲಿ ಆಸೀನರಾದ ಡಿ.ಕೆ. ಶಿವಕುಮಾರ್
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಯು.ಟಿ. ಖಾದರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಆಗ್ರಹ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ: ಜೂನ್‌ 3 ಸಂಜೆ ಪ್ರಮಾಣವಚನ
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಡಿಕೆ ಶಿವಕುಮಾರ್ ಮುಖ್ಯಮಂತ್ರಿ; ಜಿ. ಪರಮೇಶ್ವರ್ ಉಪಮುಖ್ಯಮಂತ್ರಿ 13 ಸಚಿವರೊಂದಿಗೆ ನೂತನ ಸಚಿವ ಸಂಪುಟ ಪ್ರಮಾಣ ವಚನ ಸ್ವೀಕಾರ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹ
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲು
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ಪುಂಜಾಲಕಟ್ಟೆ: ಚಿಕ್ಕಪ್ಪನಿಗೆ ಬಿಯರ್ ಬಾಟಲಿಯಿಂದ ಇರಿದು ಹತ್ಯೆ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಮನುಷ್ಯನ ಮನಸ್ಸನ್ನು ಓದುವ ಯಂತ್ರ ಸಾಧ್ಯವೇ? BCI ತಂತ್ರಜ್ಞಾನದ 100 ವರ್ಷದ ರೋಚಕ ಪಯಣ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
Prajapara News Kannada