Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಇಂದಿನಿಂದ 3 ದಿನ ಪಿಲಿಕುಳದಲ್ಲಿ 12ನೇ ಕರ್ನಾಟಕ ಹಕ್ಕಿ ಹಬ್ಬ

ಇಂದಿನಿಂದ 3 ದಿನ ಪಿಲಿಕುಳದಲ್ಲಿ  12ನೇ ಕರ್ನಾಟಕ ಹಕ್ಕಿ ಹಬ್ಬ

ಮಂಗಳೂರು: ಕರ್ನಾಟಕ ಹಕ್ಕಿ ಹಬ್ಬದ 12ನೇ ಆವೃತ್ತಿ 2026ರ ಜನವರಿ 9ರಿಂದ 11ರವರೆಗೆ ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ನಡೆಯಲಿದೆ. ರಾಜ್ಯದ ಅತ್ಯಂತ ಜೀವವೈವಿಧ್ಯ ಸಮೃದ್ಧ ಕರಾವಳಿ ಪ್ರದೇಶದಲ್ಲಿ ಈ ಹಬ್ಬವನ್ನು ಆಯೋಜಿಸಲಾಗಿದೆ.

ಈ ಬಾರಿ ಹಕ್ಕಿ ಹಬ್ಬದ ರಾಯಭಾರಿಯಾಗಿ ಬಿಳಿ ಹೊಟ್ಟೆಯ ಮೀನು ಗಿಡುಗ (ವೈಟ್ ಬೆಲಿಡ್ ಸೀ ಇಗಲ್) ಅನ್ನು ಆಯ್ಕೆ ಮಾಡಲಾಗಿದೆ. ತೀರಗಳು, ನದಿಮುಖಗಳು, ನದಿಗಳು ಹಾಗೂ ದೊಡ್ಡ ಜಲಮೂಲಗಳಲ್ಲಿ ಕಂಡುಬರುವ ಈ ಭವ್ಯ ಹಕ್ಕಿ, ಆರೋಗ್ಯಕರ ಕರಾವಳಿ ಮತ್ತು ಚೌಗು ಪ್ರದೇಶ ಪರಿಸರ ವ್ಯವಸ್ಥೆಗಳ ಪ್ರಮುಖ ಸಂಕೇತವಾಗಿದೆ. ಜಲಚರ ಅವಾಸಸ್ಥಾನಗಳು ಮತ್ತು ಮೀನು ಸಂಪತ್ತಿನ ಆರೋಗ್ಯವನ್ನು ಸೂಚಿಸುವ ಪ್ರಮುಖ ಸೂಚಕ ಪ್ರಭೇದವಾಗಿರುವುದರಿಂದ, ಕರಾವಳಿ ಮತ್ತು ನದಿಪಾತ್ರ ಪರಿಸರ ಸಂರಕ್ಷಣೆಯ ಅಗತ್ಯತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಇದನ್ನು ಮ್ಯಾಸ್ಕಾಟ್ ಆಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ: ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು

ಮಂಗಳೂರು ತನ್ನ ದೀರ್ಘ ಕರಾವಳಿ ಹಾಗೂ ಬಹು ನದಿಗಳು, ನದಿಮುಖಗಳು, ಮ್ಯಾಂಗ್ರೂವ್‌ಗಳು, ಚೌಗು ಪ್ರದೇಶಗಳು, ಲ್ಯಾಟರೈಟ್ ಪ್ರಸ್ಥಭೂಮಿಗಳು ಮತ್ತು ಅರಣ್ಯ ಪ್ರದೇಶಗಳೊಂದಿಗೆ ವಿಶಿಷ್ಟ ಪರಿಸರ ವೈವಿಧ್ಯ ಹೊಂದಿದೆ. ಈ ಆವಾಸಸ್ಥಾನಗಳು ಸಮುದ್ರ ಪಕ್ಷಿಗಳು, ತೀರ ಪಕ್ಷಿಗಳು, ರಾಪ್ಟರ್‌ಗಳು, ಜಲಪಕ್ಷಿಗಳು ಹಾಗೂ ಅರಣ್ಯ ಪ್ರಭೇದಗಳಂತಹ ಅನೇಕ ನಿವಾಸಿ ಮತ್ತು ವಲಸೆ ಹಕ್ಕಿಗಳಿಗೆ ಆಶ್ರಯವಾಗಿವೆ. ಪಶ್ಚಿಮ ಹಾರಾಟ ಮಾರ್ಗದ ಭಾಗವಾಗಿರುವ ಈ ಪ್ರದೇಶವು ವಲಸೆ ಹಕ್ಕಿಗಳಿಗೆ ಪ್ರಮುಖ ನಿಲುಗಡೆ ಹಾಗೂ ಚಳಿಗಾಲದ ತಾಣವಾಗಿಯೂ ಕಾರ್ಯನಿರ್ವಹಿಸುತ್ತದೆ.

ಹಕ್ಕಿ ಹಬ್ಬದ ಅಂಗವಾಗಿ ಪಕ್ಷಿವೀಕ್ಷಣಾ ಪಥಗಳು, ನುರಿತ ತಜ್ಞರೊಂದಿಗೆ ಕಾರ್ಯಾಗಾರಗಳು, ಪ್ರದರ್ಶನಗಳು ಮತ್ತು ಸಮುದಾಯದ ಭಾಗವಹಿಸುವಿಕೆ ಕಾರ್ಯಕ್ರಮಗಳು ನಡೆಯಲಿವೆ. ಈ ಮೂಲಕ ಪ್ರಕೃತಿಯೊಂದಿಗೆ ಸಾರ್ವಜನಿಕ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸುವುದು, ಸಂರಕ್ಷಣಾ ಜಾಗೃತಿಯನ್ನು ಹೆಚ್ಚಿಸುವುದು ಹಾಗೂ ಸುಸ್ಥಿರ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಹಬ್ಬದ ಉದ್ದೇಶವಾಗಿದೆ.

ಇದನ್ನೂ ಓದಿ: ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ

ಈ ಹಬ್ಬದ ಮತ್ತೊಂದು ವಿಶೇಷವೆಂದರೆ, ಮಂಗಳೂರಿನ ವಿವಿಧ ಕಾಲೇಜುಗಳಿಂದ 160ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಅವರಿಗೆ ಪಕ್ಷಿ ವೀಕ್ಷಣೆ ಹಾಗೂ ಪಕ್ಷಿಗಳ ಪರಿಸರ ಮಹತ್ವದ ಕುರಿತು ಪರಿಚಯ ನೀಡಲಾಗುತ್ತದೆ. ಯುವ ಪೀಳಿಗೆಯಲ್ಲಿ ಪರಿಸರ ಸಂರಕ್ಷಣೆಯ ಅರಿವು ಮೂಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಮಹತ್ವ ಪಡೆದಿದೆ.

😀
0
😍
0
😢
0
😡
0
👍
3
👎
0

Web Add
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
Prajapara News Kannada