Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಕಾಟೇರನಿಗೆ ಸಿಕ್ಕ ಗೆಲುವು ಲ್ಯಾಂಡ್ ಲಾರ್ಡ್ ಗೆ ಸಿಗಲಿಲ್ಲ!

ಕಾಟೇರನಿಗೆ ಸಿಕ್ಕ ಗೆಲುವು ಲ್ಯಾಂಡ್ ಲಾರ್ಡ್ ಗೆ ಸಿಗಲಿಲ್ಲ!

ಬೆಂಗಳೂರು: ಎರಡು ವರ್ಷಗಳ ಹಿಂದೆ ತೆರೆಕಂಡ ಡಿ ಬಾಸ್ ದರ್ಶನ್ ಅವರ ವೃತ್ತಿಜೀವನದ ಮಹತ್ವದ ಚಿತ್ರ ಕಾಟೇರ ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿತ್ತು. ಅದೇ ಛಾಯೆಯಲ್ಲಿ ನಿರ್ಮಾಣಗೊಂಡ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಸಿಗುತ್ತಿಲ್ಲ.

ಚಿತ್ರಕ್ಕೆ ವಿಮರ್ಶಕರಿಂದ ಹಾಗೂ ಚಿತ್ರರಂಗದಿಂದ ಬಹುಪಾಲು ಪ್ರಶಂಸೆಯ ಸುರಿಮಳೆ ಬಂದಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಚರ್ಚೆಗೆ ಗ್ರಾಸವಾಗಿವೆ.

ಕಾಟೇರ ಚಿತ್ರದಲ್ಲಿ ದರ್ಶನ್ ಅವರ ಜೊತೆಗೆ ನಿರ್ದೇಶಕ ತರುಣ್ ಸುಧೀರ್ ಅವರ ಬಲಿಷ್ಠ ಹಿಡಿತ ಚಿತ್ರಕ್ಕೆ ದೊಡ್ಡ ಶಕ್ತಿ ನೀಡಿತ್ತು. ಅದೇ ತಂಡದ ಬಳಗದಲ್ಲೇ ಬೆಳೆದ ಜಡೇಶ್ ಅವರ ನಿರ್ದೇಶನದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಾಯಕನಾಗಿ ವಿಜಯ್ ಕಾಣಿಸಿಕೊಂಡಿದ್ದಾರೆ. ವಿಜಯ್ ತಮ್ಮ ಕಳೆದ ಎರಡು ಚಿತ್ರಗಳಲ್ಲಿ ರೌಡಿಸಂ ಕಥಾಹಂದರದ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಒಳ್ಳೆಯ ಸಾಧನೆ ಮಾಡಿದ್ದರು.

ಇದನ್ನೂ ಓದಿ: ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್

ಆದರೆ ಈ ಬಾರಿ ಪರಿಸ್ಥಿತಿ ಭಿನ್ನವಾಗಿದೆ. ಭೀಮ ಚಿತ್ರದ ಮೊದಲ ದಿನದ ಗಳಿಕೆಯನ್ನು ಟಚ್ ಮಾಡಲು ಲ್ಯಾಂಡ್ ಲಾರ್ಡ್ಗೆ ನಾಲ್ಕು ದಿನಗಳ ಸಮಯ ಬೇಕಾಯಿತು. ಚಿತ್ರದ ಸಾಧಾರಣ ಪ್ರದರ್ಶನಕ್ಕೆ ಕಥಾಹಂದರವೂ ಒಂದು ಪ್ರಮುಖ ಕಾರಣ ಎನ್ನಲಾಗುತ್ತಿದೆ. ಕೆಲ ಪ್ರೇಕ್ಷಕರಿಗೆ ಕಥೆಯ ಅತಿರೇಕ ಅಸಮಾಧಾನ ಉಂಟುಮಾಡಿದೆ. ಇದೇ ರೀತಿಯ ಟೀಕೆಗಳು ಕಾಟೇರ ಚಿತ್ರಕ್ಕೂ ಬಂದಿದ್ದರೂ, ದರ್ಶನ್ ಅವರ ಸ್ಟಾರ್‌ಡಮ್ ಮುಂದೆ ಅವೆಲ್ಲ ಅಷ್ಟಾಗಿ ಪ್ರಭಾವ ಬೀರುವಂತಿರಲಿಲ್ಲ.

ಇದಕ್ಕೆ ಜೊತೆಗೆ ಜೈದ್ ಖಾನ್ ಅವರ ಕಲ್ಟ್ ಚಿತ್ರ ಕೂಡ ಒಂದೇ ಸಮಯದಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರು ಯಾವ ಚಿತ್ರವನ್ನು ಆಯ್ಕೆ ಮಾಡಬೇಕು ಎಂಬ ಗೊಂದಲದಲ್ಲಿದ್ದಾರೆ.

ಗಮನಾರ್ಹ ಸಂಗತಿ ಎಂದರೆ, ಕಾಟೇರ ಬಿಡುಗಡೆಯ ಸಮಯದಲ್ಲಿ ಶಾರುಖ್ ಖಾನ್ ಅವರ ಡಂಕಿ ಮತ್ತು ಪ್ರಭಾಸ್ ಅವರ ಸಲಾರ್ ಚಿತ್ರಗಳು ಕರ್ನಾಟಕದಲ್ಲಿ ಕನ್ನಡದ ಕಾಟೇರ ಎದುರು ಮಗ್ಗುಚಾಚಿದ್ದವು. ಆದರೆ ಈ ಬಾರಿ ಚಿತ್ರರಂಗದ ಸಮೀಕರಣವೇ ಉಲ್ಟಾ ಪಲ್ಟಾ ಆಗಿದೆ.

ಸಾರಥಿ ಚಿತ್ರದ ಮೂಲಕ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಮೊತ್ತ ಕಂಡಿದ್ದ ನಿರ್ಮಾಪಕರಿಗೆ ಲ್ಯಾಂಡ್ ಲಾರ್ಡ್ ನಿರಾಸೆ ಮೂಡಿಸಿದೆ.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಆದರೂ ಲ್ಯಾಂಡ್ ಲಾರ್ಡ್ನಂತಹ ಪ್ರಯೋಗಾತ್ಮಕ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಗೆಲ್ಲಬೇಕಾದ ಅಗತ್ಯವಿದೆ. ಆಗಲೇ ಜಡೇಶ್ ಅವರಂತಹ ಪ್ರತಿಭಾವಂತ ನಿರ್ದೇಶಕರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೂಮ್ಮಸ್ಸು ಹಾಗೂ ಅವಕಾಶಗಳು ದೊರೆಯಲಿವೆ.

ಲೇಖನ : ರಿಯಾಜ್ ಮೊಕಾಶಿ

😀
0
😍
0
😢
0
😡
0
👍
8
👎
0

Web Add
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
Prajapara News Kannada