Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕೌಠಾ (ಕೆ) ಗ್ರಾಪಂ ಭ್ರಷ್ಟಾಚಾರ ಪ್ರಕರಣ: ಕ್ರಮ ಕೈಗೊಳ್ಳದ ಸಿಇಒ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೌಠಾ (ಕೆ) ಗ್ರಾಪಂ ಭ್ರಷ್ಟಾಚಾರ ಪ್ರಕರಣ: ಕ್ರಮ ಕೈಗೊಳ್ಳದ ಸಿಇಒ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೌಠಾ (ಕೆ) ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಪ್ರಜಾ ಶಕ್ತಿ ಸಮಿತಿ ಜಿಲ್ಲಾ ಘಟಕ ಆಗ್ರಹಿಸಿದೆ. ಈ ಸಂಬಂಧ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ, ಕೌಠಾ (ಕೆ) ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸವಿತಾ ಹೀರೆಮಠ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ದೂರು ಸಲ್ಲಿಸಲಾಗಿತ್ತು. ಈ ಕುರಿತು ತಾಲೂಕು ಪಂಚಾಯತ್ ಅಧಿಕಾರಿಗಳು ತನಿಖೆ ನಡೆಸಿ ಭ್ರಷ್ಟಾಚಾರ ನಡೆದಿರುವುದಾಗಿ ವರದಿ ನೀಡಿದ್ದರೂ, ಹಲವು ತಿಂಗಳುಗಳಾದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದು, ಸಂಬಂಧವಿಲ್ಲದಂತೆ ವರ್ತಿಸುತ್ತಿದ್ದಾರೆ ಎಂದು ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಅಧಿಕಾರಿಯನ್ನು ತಕ್ಷಣ ಸೇವೆಯಿಂದ ವಜಾಗೊಳಿಸುವುದರ ಜೊತೆಗೆ, ಕ್ರಮ ಕೈಗೊಳ್ಳದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ವಿನೋದ ಶಿಂಧೆ (ನಗರ ಘಟಕ ಅಧ್ಯಕ್ಷರು), ಗುರು ನೇಮತಾಬಾದ್ (ತಾಲೂಕ ಅಧ್ಯಕ್ಷರು), ಮಹೇಂದ್ರಕುಮಾರ ಹೊಸಮನಿ (ಜಿಲ್ಲಾ ಉಪಾಧ್ಯಕ್ಷರು), ಆಕಾಶ ತ್ರಿಮುಖೆ (ವಿದ್ಯಾರ್ಥಿ ಘಟಕದ ಅಧ್ಯಕ್ಷರು), ಜಿಲ್ಲಾ ಅಧ್ಯಕ್ಷರು ಹಾಗೂ ರಾಜಕುಮಾರ ಹೊನ್ನಿಕೇರಿ (ಜಿಲ್ಲಾ ಖಜಾಂಚಿ) ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ: ಅರವಿಂದ ಮಲ್ಲೀಗೆ ಬೀದರ್,

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading