Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಗೇರುಕಟ್ಟೆ ಬಳಿ ಬಾಲಕ ನಾಪತ್ತೆ: ಹುಡುಕಾಟ ತೀವ್ರ

ಗೇರುಕಟ್ಟೆ ಬಳಿ ಬಾಲಕ ನಾಪತ್ತೆ: ಹುಡುಕಾಟ ತೀವ್ರ

ಬೆಳ್ತಂಗಡಿ: ತಾಲ್ಲೂಕಿನ ಗೇರುಕಟ್ಟೆ ಗ್ರಾಮದ ಬರಮೇಲು ಪ್ರದೇಶದಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ನಾಪತ್ತೆಯಾದ ಬಾಲಕನನ್ನು ಸುಮಂತ್ (16) ಎಂದು ಗುರುತಿಸಲಾಗಿದ್ದು, ಆತ ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟ ನಂತರ ಕಾಣೆಯಾಗಿದ್ದಾನೆ. ಕುಟುಂಬದವರ ಮಾಹಿತಿ ಪ್ರಕಾರ, ಸುಮಂತ್ ಧನು ಪೂಜೆಯ ಹಿನ್ನೆಲೆಯಲ್ಲಿ ಸಮೀಪದ ಪ್ರದೇಶಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದನು. ಆದರೆ ನಂತರ ಆತ ಮನೆಗೆ ಮರಳದೇ ಇರುವುದರಿಂದ ಕುಟುಂಬದವರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಹುಡುಕಾಟದ ವೇಳೆ ಬಾಲಕನ ಮನೆ ಸಮೀಪದ ತೋಟದ ಕೆರೆಯ ಬಳಿ ರಕ್ತದ ಗುರುತುಗಳು ಪತ್ತೆಯಾಗಿದ್ದು, ಇದರಿಂದ ಪ್ರಕರಣದ ಬಗ್ಗೆ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ವಿಷಯ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವ್ಯಾಪಕ ಹುಡುಕಾಟ ನಡೆಸುತ್ತಿದ್ದಾರೆ. ಕೆರೆ ಹಾಗೂ ಅರಣ್ಯ ಪ್ರದೇಶಗಳಲ್ಲಿ ವಿಶೇಷ ಗಮನಹರಿಸಿ ಶೋಧ ಕಾರ್ಯ ಮುಂದುವರಿಸಲಾಗಿದೆ.

ಈ ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಾಲಕನ ಪತ್ತೆಗಾಗಿ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ
😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading