Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಪುತ್ತೂರು: ಸಾಲದ ವಿವಾದಕ್ಕೆ ಚಾಕು ಇರಿತ – ಪ್ರಕರಣ ದಾಖಲು

ಪುತ್ತೂರು: ಸಾಲದ ವಿವಾದಕ್ಕೆ ಚಾಕು ಇರಿತ – ಪ್ರಕರಣ ದಾಖಲು

ಪುತ್ತೂರು: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಸರೋಳಿ ಮನೆ ನಿವಾಸಿ ಅಬೂಬಕ್ಕರ್ ರಾಶಿಕ್ (28), ತಂದೆ ಇಸ್ಮಾಯಿಲ್ ಅವರ ದೂರಿನ ಮೇರೆಗೆ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚಾಕು ಇರಿತ ಪ್ರಕರಣವನ್ನು ಪುತ್ತೂರು ನಗರ ಪೊಲೀಸ್ ಠಾಣೆ ದಾಖಲಿಸಿಕೊಂಡಿದೆ.

ಸೂರಜ್ ಎಂಬವರು ಕೆಎ–15–ಎನ್–0590 ಸಂಖ್ಯೆಯ ವಾಹನದ ಮಾಲೀಕರಾಗಿದ್ದು, ಸಾಲದ ಬಾಕಿ ಹಣವನ್ನು ಪಾವತಿಸದೇ ಇದ್ದ ಹಿನ್ನೆಲೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯವರು ಆ ವಾಹನವನ್ನು ಜಪ್ತಿ ಮಾಡಿದ್ದರು. ನಂತರ ಅಬೂಬಕ್ಕರ್ ರಾಶಿಕ್ ಅವರು ಬಾಕಿ ಹಣವನ್ನು ಪಾವತಿಸಿ, ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ ಆ ವಾಹನವನ್ನು ಬಿಡುಗಡೆ ಮಾಡಿಸಿಕೊಂಡಿದ್ದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಈ ವಿಚಾರದಿಂದ ಅಸಮಾಧಾನಗೊಂಡ ಸೂರಜ್ ಹಾಗೂ ಇನ್ನಿತರ 7–8 ಮಂದಿ ದಿನಾಂಕ 07-01-2026ರ ಮಧ್ಯರಾತ್ರಿ ಸತ್ತಿಕಲ್ಲು ಭಾರತ್ ಪೆಟ್ರೋಲ್ ಪಂಪ್ ಬಳಿ ಅಕ್ರಮ ಕೂಟವಾಗಿ ಸೇರಿ ಅಬೂಬಕ್ಕರ್ ರಾಶಿಕ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸೂರಜ್ ಅವರು ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಗಾಯಗೊಂಡ ಅಬೂಬಕ್ಕರ್ ರಾಶಿಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರ ಜೀವಕ್ಕೆ ಅಪಾಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ 07-01-2026ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 04/2026ರಂತೆ ಕಲಂ 189(2), 191(2), 191(3), 115(2), 118, 109 ಹಾಗೂ 190 (BNS–2023) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

😀
0
😍
0
😢
0
😡
0
👍
0
👎
0

Web Add
Prajapara News Kannada