Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಫೆ.1 ರಂದು ಸಂವಿಧಾನ ದಿನಾಚರಣೆ ; ಹರಿರಾಮ್‌ ಸಾರಥ್ಯ

ಫೆ.1 ರಂದು ಸಂವಿಧಾನ ದಿನಾಚರಣೆ ; ಹರಿರಾಮ್‌ ಸಾರಥ್ಯ

ಪಾವಗಡ: ಭಾರತೀಯ ಪರಿವರ್ತನ ಸಂಘ (BPS), ಪಾವಗಡ ತಾಲ್ಲೂಕು ಘಟಕದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 01-02-2026, ಭಾನುವಾರ ಬೆಳಗ್ಗೆ 10:30ಕ್ಕೆ ತುಮಕೂರು ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಸಂವಿಧಾನದ ಆಶಯಗಳು ಮತ್ತು ನಮ್ಮ ಜವಾಬ್ದಾರಿ” ಹಾಗೂ “ಸದೃಢ ಪಾವಗಡಕ್ಕಾಗಿ ನಮ್ಮ ಸಂಕಲ್ಪ” ಎಂಬ ವಿಷಯಗಳನ್ನೊಳಗೊಂಡ ಈ ಕಾರ್ಯಕ್ರಮದಲ್ಲಿ ಸಂವಿಧಾನದ ಮೌಲ್ಯಗಳು, ಪ್ರಜಾಸತ್ತಾತ್ಮಕ ಹಕ್ಕುಗಳು ಮತ್ತು ನಾಗರಿಕರ ಕರ್ತವ್ಯಗಳ ಕುರಿತು ಚರ್ಚೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೈಕೋರ್ಟ್ ವಕೀಲರೂ ಹಾಗೂ ಭಾರತೀಯ ಪರಿವರ್ತನ ಸಂಘ (BPS)ದ ರಾಜ್ಯಾಧ್ಯಕ್ಷರು ಆದ ಹರಿರಾಮ್ ಎ. ಅವರು ಭಾಗವಹಿಸಲಿದ್ದು. ಸಂವಿಧಾನಾತ್ಮಕ ಮೌಲ್ಯಗಳ ಅರಿವು, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮಹತ್ವದ ಕುರಿತು ಅವರು ಉಪನ್ಯಾಸ ನೀಡಲಿದ್ದಾರೆ.

ಸಂವಿಧಾನ ತಿಳಿಯೋಣ, ಭಾರತೀಯರಾಗೋಣ” ಮತ್ತು “ನಾವು ಭಾರತೀಯರು – ಭಾರತೀಯತೆ ನಮ್ಮ ಉಸಿರು” ಎಂಬ ಘೋಷವಾಕ್ಯಗಳೊಂದಿಗೆ ನಡೆಯುವ ಈ ಕಾರ್ಯಕ್ರಮವು ನಾಗರಿಕರಲ್ಲಿ ಸಂವಿಧಾನದ ಮಹತ್ವವನ್ನು ಬೇರೂರಿಸುವ ಉದ್ದೇಶ ಹೊಂದಿದೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಸಂಘಟನೆಯ ಕಾರ್ಯಕರ್ತರು ಹಾಗೂ ಸಂವಿಧಾನಪರ ಚಿಂತಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘಟನೆಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
1
👎
1

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading