Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಸಾರಿಗೆ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತಸಾರಿಗೆ ಬಸ್ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೀದರ್: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಬೀದರ್–ಔರಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಔರಾದ್ ತಾಲೂಕಿನ ಬಲ್ಲೂರ (ಜೆ) ಗ್ರಾಮದ ನಿವಾಸಿ ಬಸವರಾಜ ಕಂಟೆಪ್ಪಾ (34) ಮೃತರು. ಮೃತರಿಗೆ ತಂದೆ–ತಾಯಿ, ಪತ್ನಿ ಹಾಗೂ ಒಬ್ಬ ಪುತ್ರ ಮತ್ತು ಒಬ್ಬ ಪುತ್ರಿ ಇದ್ದಾರೆ ಎಂದು ತಿಳಿದು ಬಂದಿದೆ.

ಮೃತ ಬಸವರಾಜ ಅವರು ಸ್ವಗ್ರಾಮದಿಂದ ಕೌಠಾ (ಬಿ) ಗ್ರಾಮದ ಕಡೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಔರಾದ್‌ನಿಂದ ಬೀದರ್ ಕಡೆಗೆ ಸಾಗುತ್ತಿದ್ದ ಸಾರಿಗೆ ಬಸ್ ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಯಿಂದ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಘಟನೆಯ ಮಾಹಿತಿ ತಿಳಿದ ಕೂಡಲೇ ಸಂತಪೂರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ಶವಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಸಂತಪೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading