Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಬೆಳ್ತಂಗಡಿಯಲ್ಲಿ ದಲಿತರ ಶಿಕ್ಷಣ ಮತ್ತು ಭೂ ಹಕ್ಕಿಗಾಗಿ ಹಕ್ಕೊತ್ತಾಯ ಜಾಥಾ ಹಾಗೂ ಸಮಾವೇಶ

ಬೆಳ್ತಂಗಡಿಯಲ್ಲಿ ದಲಿತರ ಶಿಕ್ಷಣ ಮತ್ತು ಭೂ ಹಕ್ಕಿಗಾಗಿ ಹಕ್ಕೊತ್ತಾಯ ಜಾಥಾ ಹಾಗೂ ಸಮಾವೇಶ

ಬೆಳ್ತಂಗಡಿ: ತಾಲೂಕಿನ ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಆಶ್ರಯದಲ್ಲಿ ನಾಗರಿಕ ಸೇವಾ ಟ್ರಸ್ಟ್ ಗುರುವಾಯನಕೆರೆ ಸಹಭಾಗಿತ್ವದಲ್ಲಿ ತಾಲೂಕು ಮಟ್ಟದ ಹಕ್ಕೊತ್ತಾಯ ಜಾಥಾ ಹಾಗೂ ಸಮಾವೇಶ ನಡೆಯಿತು. ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿಯಿಂದ ಮೆರವಣಿಗೆಗೆ ಚಾಲನೆ ನೀಡಲಾಗಿದ್ದು ಅಯ್ಯಪ್ಪಗುಡಿಯ ಬಳಿಯಿಂದ ಆರಂಭವಾದ ಜಾಥಾ ಮುಖ್ಯ ರಸ್ತೆಯ ಮೂಲಕ ಸಾಗಿತು. ನಮ್ಮ ಭೂಮಿ ನಮ್ಮ ಹಕ್ಕು ಎಂಬ ಘೋಷಣೆಗಳೊಂದಿಗೆ ಜಾಥಾ ಸಿ ವಿ ಸಿ ಹಾಲ್ ತಲುಪಿತು.


ಸಮಾವೇಶದಲ್ಲಿ ಭೂಮಿಗೆ ಸಂಬಂಧಿಸಿದ ಹನ್ನೊಂದು ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದ ಮೂರು ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಸಂಚಾಲಕ ಎಂ ಬಿ ಕರಿಯ ಪ್ರಸ್ತಾವನೆ ಮಂಡಿಸಿದರು. ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ ಸೋಮನಾಥ ನಾಯಕ್ ಸಮಾವೇಶದ ಉದ್ದೇಶ ಮತ್ತು ಹಿನ್ನೆಲೆಯನ್ನು ವಿವರಿಸಿದರು.
ಸಭೆಯಲ್ಲಿ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ರಾಜಗೋಪಾಲ್ ಚಿಂತಕ ಸಾಹಿತಿ ಲಕ್ಷ್ಮೀಶ ತೋಳ್ವಾಡಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಸಂಚಾಲಕ ರಮೇಶ್ ಆರ್ ಸೇರಿದಂತೆ ಸದಾಶಿವ ಹೆಗ್ಡೆ ಬಾಬಿ ಮಾಲಾಡಿ ಸಹ ಸಂಚಾಲಕರಾದ ಬಾಬು ಎ ನಾರಾಯಣ ಕಿಲಂಗೋಡಿ ಸುಕೇಶ್ ಮಾಲಾಡಿ ಉಪಸ್ಥಿತರಿದ್ದರು.

😀
0
😍
0
😢
0
😡
0
👍
1
👎
0

Web Add
Prajapara News Kannada