Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಕಿಡ್ನಾಪ್ ಯತ್ನ – ಚೂರಿಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಕಿಡ್ನಾಪ್ ಯತ್ನ – ಚೂರಿಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ನಡೆದ ಸುಮಂತ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಗಾರ ಯಾರೆಂಬುದು ಇನ್ನು ಪತ್ತೆಯಾಗಿಲ್ಲ. ಈ ಮದ್ಯೆ ಇದೀಗ ಅಪ್ರಾಪ್ತ ಬಾಲಕಿಯನ್ನು ಹಾಡಹಗಲೇ ಕಿಡ್ನಾಪ್ ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸಂತಕಟ್ಟೆ ಪ್ರದೇಶದಲ್ಲಿ ನಡೆದಿದೆ.

ಕಾಲೇಜಿಗೆ ತೆರಳಲು ಬಸ್ ನಿಲ್ದಾಣದ ಬಳಿ ನಿಂತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿ ಬಲವಂತವಾಗಿ ಕಾರಿನೊಳಗೆ ಹಾಕಲು ಯತ್ನಿಸಿದ್ದಾರೆ. ಬಾಲಕಿ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿದ ವೇಳೆ ದುಷ್ಕರ್ಮಿಗಳು ಚೂರಿಯಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಯ ಪರಿಣಾಮವಾಗಿ ಬಾಲಕಿಯ ಕೈ ಮತ್ತು ಬೆರಳಿಗೆ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಗಾಯಗೊಂಡ ಬಾಲಕಿಯನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ಘಟನೆ ಸ್ಥಳೀಯರಲ್ಲಿ ಭಯದ ವಾತಾವರಣವನ್ನುಂಟು ಮಾಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. ಸಾರ್ವಜನಿಕರು ಆತಂಕದಲ್ಲಿದ್ದು, ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಆಗ್ರಹ ವ್ಯಕ್ತವಾಗಿದೆ.

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading