Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಮಂಗಳೂರು: ಮಾಜಿ ಪತ್ರಕರ್ತ ಶ್ರೀನಿವಾಸ ನಂದಗೋಪಾಲ್ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ದ್ವಿಚಕ್ರ ವಾಹನ ಶೈಕ್ಷಣಿಕ ಅಭಿಯಾನ ‘ಡ್ರೀಮ್ಸ್ ಆನ್ ವೀಲ್ಸ್’ ಶುಕ್ರವಾರ ಮಂಗಳೂರಿನಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು. ರಾಜ್ಯಾದ್ಯಂತ ಸಂಚರಿಸಿ ರಾಜಕುಶಾಲನಗರದಿಂದ ಮಂಗಳೂರಿಗೆ ಆಗಮಿಸುವ ಮೂಲಕ ಅವರು 6,493 ಕಿಲೋಮೀಟರ್‌ಗಳ ಸುದೀರ್ಘ ಪ್ರಯಾಣವನ್ನು ಪೂರ್ಣಗೊಳಿಸಿದರು.

ಕಳೆದ ವರ್ಷ ನವೆಂಬರ್ 24ರಂದು ಆರಂಭವಾದ ಈ ಅಭಿಯಾನದಲ್ಲಿ ನಂದಗೋಪಾಲ್ ಅವರು ತಮ್ಮ ಹೋಂಡಾ ಸಿಬಿ350 ಮೋಟಾರ್ ಬೈಕ್ ಮೂಲಕ 31 ಜಿಲ್ಲೆಗಳಲ್ಲಿ ಸಂಚರಿಸಿ, ಗ್ರಾಮೀಣ ಭಾಗದ 46 ಸರ್ಕಾರಿ ಶಾಲೆಗಳ ಸುಮಾರು 5 ಸಾವಿರ ವಿದ್ಯಾರ್ಥಿಗಳನ್ನು ತಲುಪಿದರು. ವಿಶೇಷವಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆ, ವೃತ್ತಿಜೀವನದ ಮಾರ್ಗದರ್ಶನ ಹಾಗೂ ಗುರಿ ಸಾಧನೆ ಕುರಿತು ಸಂವಾದ ನಡೆಸಿದರು.

ಅಭಿಯಾನದ ಅವಲೋಕನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವುದಾಗಿ ನಂದಗೋಪಾಲ್ ತಿಳಿಸಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೌಶಲ ತರಬೇತಿ ನೀಡುವ ಮೂಲಕ ಆತ್ಮವಿಶ್ವಾಸ ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಈ ವರದಿ ಪೂರಕವಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

“ಈ ಪ್ರಯಾಣವು ಕೇವಲ ಸಂಚಾರವಲ್ಲ, ಇದೊಂದು ಮಿಷನ್. ಹಿಂದುಳಿದ ಉತ್ತರ ಕರ್ನಾಟಕದ ಜಿಲ್ಲೆಗಳಿಂದ ಹಿಡಿದು ದಕ್ಷಿಣದ ಬುಡಕಟ್ಟು ಪ್ರದೇಶಗಳವರೆಗೆ ನೆಲಮಟ್ಟದ ಶೈಕ್ಷಣಿಕ ವಾಸ್ತವಗಳನ್ನು ಅರಿಯುವುದು ನನ್ನ ಉದ್ದೇಶವಾಗಿತ್ತು. ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸ್ಥಳೀಯರೊಂದಿಗೆ ನಡೆಸಿದ ಮಾತುಕತೆಯಿಂದ ಕಲಿಕೆಯ ಸವಾಲುಗಳು, ಮೂಲಸೌಕರ್ಯಗಳ ಕೊರತೆ ಮತ್ತು ವೃತ್ತಿಜೀವನ ಮಾರ್ಗದರ್ಶನದ ಅಗತ್ಯತೆ ಸ್ಪಷ್ಟವಾಗಿದೆ,” ಎಂದು ನಂದಗೋಪಾಲ್ ಅಭಿಪ್ರಾಯಪಟ್ಟರು.

😀
0
😍
0
😢
0
😡
0
👍
0
👎
0

Web Add
Prajapara News Kannada