ಸುಳ್ಯ: ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘ (AVSS) ನಿ. ಸುಳ್ಯ ಶಾಖೆಯ ವತಿಯಿಂದ ಸಂವಿಧಾನ ಶಿಲ್ಪಿ, ವಿಶ್ವನಾಯಕ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ ಕಾರ್ಯಕ್ರಮವನ್ನು ಏಪ್ರಿಲ್ 14, 2026ರಂದು ಭಕ್ತಿಪೂರ್ವಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ಈ ಕುರಿತು AVSS ಸುಳ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಸಭೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾದ ಜಿ. ದೇವರಾಜ್ ಸೋಸಲೆ ಅವರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು. ಸುಳ್ಯ ಶಾಖೆಯಲ್ಲಿ ನಡೆಯುವ ಈ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ನಾಯಕರು, ಅಂಬೇಡ್ಕರ್ ಅನುಯಾಯಿಗಳು, ಮಹಿಳೆಯರು, ವಿದ್ಯಾರ್ಥಿಗಳು ಹಾಗೂ AVSS ಷೇರುದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.
ಸಭೆಯಲ್ಲಿ AVSS ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚೆ ನಡೆಸಿದರು.
