Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಸುಳ್ಯ : ದಿ. ಸುಧೀರ್ ರೈ ಮೇನಾಲರವರ 3ನೇ ವರ್ಷದ ಪುಣ್ಯಸ್ಮರಣೆ

ಸುಳ್ಯ : ದಿ. ಸುಧೀರ್ ರೈ ಮೇನಾಲರವರ 3ನೇ ವರ್ಷದ ಪುಣ್ಯಸ್ಮರಣೆ

ಸುಳ್ಯ ತಾಲೂಕಿನ ಅಜ್ಜಾವರ ಮೇನಾಲದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ದಿ. ಸುಧೀರ್ ರೈ ಮೇನಾಲರವರ ಮೂರನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ವಿಷ್ಣು ಯುವಕ ಮಂಡಲ (ರಿ.) ಹಾಗೂ ವಿಷ್ಣು ಕ್ರಿಕೆಟರ್ಸ್ ಮೇನಾಲ ವತಿಯಿಂದ ಆಯೋಜಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸುಧೀರ್ ರೈ ಮೇನಾಲರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನವನ್ನು ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ದಿ. ಸುಧೀರ್ ರೈ ಮೇನಾಲರ ಜೀವನ, ಸಮಾಜಮುಖಿ ಚಟುವಟಿಕೆಗಳು ಹಾಗೂ ಅವರ ಸೇವಾ ಮನೋಭಾವದ ಬಗ್ಗೆ ಸ್ಮರಿಸಿದರು.
ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಸುಧೀರ್ ರೈ ಮೇನಾಲರ ಒಡನಾಡಿಗಳಾದ ವಿಷ್ಣು ಯುವಕ ಮಂಡಲ (ರಿ.) ಅಧ್ಯಕ್ಷ ರಂಜೀತ್ ರೈ ಮೇನಾಲ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ದ.ಕ. ಜಿಲ್ಲಾ ಅಧ್ಯಕ್ಷ ಚಂದ್ರಶೇಖರ ಕೆ. ಪಲ್ಲತ್ತಡ್ಕ, ವಿಷ್ಣು ಯುವಕ ಮಂಡಲದ ಗೌರವಾಧ್ಯಕ್ಷ ಶ್ರೀಧರ್ ಮಣಿಯಾಣಿ ಮೇನಾಲ, ಅಂಬೇಡ್ಕರ್ ಆದರ್ಶ ಸೇವಾ ಸಮಿತಿ ಸುಳ್ಯ ತಾಲೂಕು ಅಧ್ಯಕ್ಷ ಸತೀಶ್ ಬೂಡುಮಕ್ಕಿ, ಅಜ್ಜಾವರ ಪಂಚಾಯತ್ ಸಿಬ್ಬಂದಿ ಲೋಕೇಶ್ ಪಿ.ಆರ್. ಪಲ್ಲತ್ತಡ್ಕ ಹಾಗೂ ಅಡ್ಪಂಗಾಯ ಪ್ರೌಢ ಶಾಲೆಯ ಎಸ್‌ಡಿಎಂಸಿ ಉಪಾಧ್ಯಕ್ಷ ಸೌಕತ್ ಆಲಿ ಮೇನಾಲ ಮಾತನಾಡಿ, ಸುಧೀರ್ ರೈ ಮೇನಾಲರ ಸ್ನೇಹಪರತೆ, ಸಮಾಜದೊಂದಿಗೆ ಅವರ ನಂಟು ಮತ್ತು ಸೇವಾ ಕಾರ್ಯಗಳನ್ನು ನೆನಪಿಸಿದರು.
ಕಾರ್ಯಕ್ರಮದಲ್ಲಿ ಶ್ರೀನಿವಾಸ ಶೆಟ್ಟಿ, ಜಯರಾಮ ಮೇನಾಲ, ಸದಾನಂದ ರೈ ಮೇನಾಲ, ಶರಣ್ಯ ರಾವ್ ತುದಿಯಡ್ಕ, ಉಮೇಶ್ ಇರಂತಮಜಲು, ಭಾಸ್ಕರ್ ಕಲ್ಲಗುಡ್ಡೆ, ಕೃಷ್ಣಪ್ಪ ಕಲ್ಲಗುಡ್ಡೆ, ಸಿದ್ಧೀಕ್ ಇರಂತಮಜಲು, ಹಾಭೀದ್ ಮೇನಾಲ, ಸುಂದರ ಬಿ.ಕೆ. ಬಾಡೇಲು, ದಾಮೋದರ ಕುಲಾಲ್, ರಶೀದ್ ಇರಂತಮಜಲು, ಗಿರೀಶ್ ಕಲ್ಲಗುಡ್ಡೆ, ಮಧುಸೂಧನ್ ಕಾಟಿಪಳ್ಳ, ಗಿರೀಶ್ ನಾಯ್ಕ, ಯಜ್ಞೇಶ್ ಮೇನಾಲ, ರಮೇಶ್ ಮೇನಾಲ, ಅನಿಲ್ ಇರಂತಮಜಲು, ರಾಮ ಬಾಡೇಲು, ಸಂದೇಶ್ ಇರಂತಮಜಲು ಸೇರಿದಂತೆ ಹಲವರು ಭಾಗವಹಿಸಿ ದಿವಂಗತರಿಗೆ ಗೌರವ ನಮನ ಸಲ್ಲಿಸಿದರು.

😀
0
😍
0
😢
0
😡
0
👍
0
👎
0

Web Add
Prajapara News Kannada