Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಲೋಕನಾಯಕ ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸಚಿವ ಮುನಿಯಪ್ಪ

ಬೀದರ್: ಬೀದರ್‌ನ ಹಿರಿಯ ರಾಜಕಾರಣಿ, ಮಾಜಿ ಸಚಿವರು ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷರಾದ ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿದ್ದು, ಅವರು ಬೀದರ್ ನಗರದ ಗುದಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ 102 ವರ್ಷದ ಭೀಮಣ್ಣ ಖಂಡ್ರೆ ಅವರು ಕಳೆದ ಒಂದು ವಾರದಿಂದ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಮುನಿಯಪ್ಪ ಅವರು ಗುದಗೆ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆ ನೀಡುತ್ತಿರುವ ವೈದ್ಯರಿಂದ ಭೀಮಣ್ಣ ಖಂಡ್ರೆ ಅವರ ಪ್ರಸ್ತುತ ಆರೋಗ್ಯ ಸ್ಥಿತಿಯ ಕುರಿತು ವಿವರವಾದ ಮಾಹಿತಿ ಪಡೆದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಆಸ್ಪತ್ರೆ ಭೇಟಿ ವೇಳೆ ಮಾಜಿ ಸಚಿವರಾದ ಹೆಚ್. ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ಶಿವಪ್ಪ ಬಿ.ಕೆ., ವಿಜಯಕುಮಾರ್ ಜಿ. ರಾಮಕೃಷ್ಣ, ಚಂದ್ರಕಾಂತ್ ಬೆಹಿಪ್ಪಳಗಾವ್, ಫರ್ನಾಂಡಿಸ್, ಕಮಲಾಕರ್ ಹೆಗಡೆ, ರೋಹಿದಾಸ್ ಗೋಡೆ, ದೇವಿದಾಸ್, ಶಾಮಣ್ಣ ಬಂದೋಳಗಿ, ಪುರುಷೋತ್ತಮ್, ವಿಶ್ವನಾಥ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಭೀಮಣ್ಣ ಖಂಡ್ರೆ ಅವರು ಶೀಘ್ರವಾಗಿ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಸಚಿವ ಮುನಿಯಪ್ಪ ಅವರು ಹಾರೈಸಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading