Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್‌ : ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಬೀದರ್‌ : ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ವ್ಯಕ್ತಿ ಸಾವು!

ಚಿಟಗುಪ್ಪ: ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ವೈರ್‌ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಕುತ್ತಿಗೆ ಸೀಳಿಕೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

ಮೃತರನ್ನು ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ನಿವಾಸಿ ಸಂಜಕುಮಾರ ಗುಂಡಪ್ಪ (48) ಎಂದು ಗುರುತಿಸಲಾಗಿದೆ. ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ.

ಮಗಳಿಗೆ ಕರೆ ತರಲು ಹೋಗುತ್ತಿದ್ದಾಗ ದುರಂತ

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಂಜಕುಮಾರ ಅವರು ಹುಮನಾಬಾದ್‌ ಪಟ್ಟಣದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗಳನ್ನು ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರೆ ತರಲು ಬೈಕ್‌ ಮೇಲೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಳಮಡಗಿ ಗ್ರಾಮದ ಸೇತುವೆ ಸಮೀಪ ಬೈಕ್‌ ಸಾಗುತ್ತಿದ್ದಾಗ, ಅಚಾನಕ್‌ವಾಗಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಗುಲಿ ತೀವ್ರವಾಗಿ ಕತ್ತರಿಸಿದೆ.

ದಾರದಿಂದ ತೀವ್ರವಾಗಿ ಗಾಯಗೊಂಡ ಸಂಜಕುಮಾರ ಅವರು ಬೈಕ್‌ ಮೇಲಿಂದ ಕೆಳಗೆ ಬಿದ್ದು, ಕೆಲಕಾಲ ರಕ್ತದ ಮಡವಿನಲ್ಲಿ ಹೊರಳಾಡಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಾಳಿಪಟ ಹಬ್ಬ ಸಂಭ್ರಮವೇ ಜೀವಾಪಾಯ

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಚಿಟಗುಪ್ಪ ತಾಲೂಕಿನಲ್ಲಿ ಗಾಳಿಪಟ ಹಾರಿಸುವ ಸಂಪ್ರದಾಯ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಳಸಲಾಗುತ್ತಿರುವ ವೈರ್‌ ಮಾಂಜಾ ದಾರಗಳು ಮನುಷ್ಯರ ಜೀವಕ್ಕೆ ಭಾರೀ ಅಪಾಯವಾಗುತ್ತಿವೆ. ಈ ಘಟನೆಯ ಎರಡು ದಿನಗಳ ಹಿಂದಷ್ಟೇ, ಗಾಳಿಪಟದ ದಾರ ಕೈಗೆ ಸಿಲುಕಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕೂಡ ತಾಲೂಕಿನಲ್ಲಿ ವರದಿಯಾಗಿತ್ತು.

ಈ ಹಿನ್ನೆಲೆ ಚಿಟಗುಪ್ಪ ತಹಸೀಲ್ದಾರ್‌ ಮಂಜುನಾಥ ಪಾಂಚಾಳ ಅವರು, ತಾಲೂಕಿನಾದ್ಯಂತ ವೈರ್‌ ಮಾಂಜಾ ದಾರಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮನ್ನಾಏಖೆಳ್ಳಿ ಪೊಲೀಸ್‌ ಠಾಣೆಯ ಅಧಿಕಾರಿಗಳು,
“ನಾವು ಸ್ಥಳಕ್ಕೆ ಹೋದ ವೇಳೆ ದಾರ ಕಂಡುಬಂದಿಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ಪರಿಶೀಲನೆ ಮುಂದುವರಿದಿದೆ.

ಈ ದುರ್ಘಟನೆ ಗಾಳಿಪಟ ಹಬ್ಬದ ಸಂಭ್ರಮದ ನಡುವೆಯೇ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಅಪಾಯಕಾರಿ ಮಾಂಜಾ ದಾರಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
0
😢
1
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading