Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ನಿಷೇಧಿತ ಚೀನಾ ಮಾಂಜಾ ದಾರದಿಂದ ಬೈಕ್ ಸವಾರ ಸಾವು; ಸಚಿವ ಈಶ್ವರ ಬಿ. ಖಂಡ್ರೆ ಸಾಂತ್ವನ

ನಿಷೇಧಿತ ಚೀನಾ ಮಾಂಜಾ ದಾರದಿಂದ ಬೈಕ್ ಸವಾರ ಸಾವು; ಸಚಿವ ಈಶ್ವರ ಬಿ. ಖಂಡ್ರೆ ಸಾಂತ್ವನ

ಬೀದರ್: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಾಳಿಪಟ ಹಾರಿಸುವ ವೇಳೆ ನಿಷೇಧಿತ ಚೀನಾ ತಯಾರಿಕೆಯ ಮಾಂಜಾ ದಾರ ಬಳಕೆಯಿಂದ ಸಂಭವಿಸಿದ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ–65ರ ನಿರ್ಣಾ ಕ್ರಾಸ್ ಸಮೀಪ, ಬೈಕ್‌ನಲ್ಲಿ ಸಂಚರಿಸುತ್ತಿದ್ದ ಸಂಜುಕುಮಾರ್ ಗುಂಡಪ್ಪ ಹೊಸಮನಿ (ನಿವಾಸಿ: ಬಂಬುಳಗಿ ಗ್ರಾಮ, ಬೀದರ್ ತಾಲ್ಲೂಕು) ಅವರು ಮಾಂಜಾ ದಾರಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಈ ದುರ್ಘಟನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಚಿವರು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ಧನ ಸಹಾಯ ನೀಡಿದರು. ಜೊತೆಗೆ ಸರ್ಕಾರದ ವತಿಯಿಂದಲೂ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ನಿಷೇಧಿತ ಚೀನಾ ಮಾಂಜಾ ದಾರ ಮಾನವ ಜೀವಕ್ಕೆ ಅತ್ಯಂತ ಅಪಾಯಕಾರಿ ಆಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಚಿವರು ತಿಳಿಸಿದರು. ನಿಷೇಧಿತ ಮಾಂಜಾ ದಾರದ ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ತಡೆಗಟ್ಟುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಎಚ್ಚರ ವಹಿಸಿ ಸಹಕರಿಸಬೇಕೆಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೀದರ್ ಜಿಲ್ಲಾಧಿಕಾರಿ ಶೀಲಾ ಶರ್ಮಾ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಡಾ. ಗಿರೀಶ್ ದಿಲೀಪ್ ಬದೋಲೆ ಉಪಸ್ಥಿತರಿದ್ದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲೆ

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading