Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಡಾ. ಭೀಮಣ್ಣ ಖಂಡ್ರೆ ವಿಧಿವಶ – ಸಮಾಜಕ್ಕೆ ಅಪಾರ ನಷ್ಟ

ಡಾ. ಭೀಮಣ್ಣ ಖಂಡ್ರೆ ವಿಧಿವಶ – ಸಮಾಜಕ್ಕೆ ಅಪಾರ ನಷ್ಟ

ಬೀದರ್: ಸಮಾಜ ಸೇವೆ, ಮಾನವೀಯತೆ ಹಾಗೂ ಮೌಲ್ಯಗಳ ಪ್ರತೀಕವಾಗಿದ್ದ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರು ಶುಕ್ರವಾರ ರಾತ್ರಿ 10.47 ಗಂಟೆಗೆ ವಿಧಿವಶರಾದ ಸುದ್ದಿ ಸಾರ್ವಜನಿಕರಲ್ಲಿ ಅಪಾರ ದುಃಖವನ್ನುಂಟುಮಾಡಿದೆ. ಸರಳತೆ, ಸತ್ಯನಿಷ್ಠೆ ಮತ್ತು ಜನಪರ ಕಾಳಜಿಯೊಂದಿಗೆ ಜೀವನ ನಡೆಸಿದ ಅವರು, ತಮ್ಮ ಸಂಪೂರ್ಣ ಜೀವನವನ್ನೇ ಸಮಾಜದ ಹಿತಕ್ಕಾಗಿ ಅರ್ಪಿಸಿದ ಮಹಾನ್ ವ್ಯಕ್ತಿತ್ವವಾಗಿದ್ದರು.

ಡಾ. ಭೀಮಣ್ಣ ಖಂಡ್ರೆ ಅವರು ಸಮಾಜದ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಅಹರ್ನಿಶಿ ಶ್ರಮಿಸಿ, ವಿಶೇಷವಾಗಿ ಹಿಂದುಳಿದ ಹಾಗೂ ನಿರ್ಲಕ್ಷಿತ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಿದರು. ಅವರ ಸೇವಾ ಮನೋಭಾವ, ನಿಸ್ವಾರ್ಥತೆ ಮತ್ತು ಮಾನವೀಯ ಸ್ಪರ್ಶವು ಅನೇಕ ಜನರ ಬದುಕಿನಲ್ಲಿ ಬೆಳಕಾಗಿ ಉಳಿದಿದೆ. ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ, ಮೌಲ್ಯಾಧಾರಿತ ಜೀವನದ ಜೀವಂತ ಮಾದರಿಯಾಗಿದ್ದರು.

ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಸಮಸ್ತ ಸಮಾಜಕ್ಕೂ ತುಂಬಲಾರದ ನಷ್ಟ ಉಂಟಾಗಿದೆ. ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕ್ಷೇತ್ರದ ಅನೇಕ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿ, ಅವರ ಅಪಾರ ಸೇವೆಯನ್ನು ಸ್ಮರಿಸಿದ್ದಾರೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಅಂತ್ಯಕ್ರಿಯೆಯು ದಿನಾಂಕ 17/01/2026, ಶನಿವಾರ ಸಾಯಂಕಾಲ 5:00 ಗಂಟೆಗೆ ಚಿಕಲಚಂದಾ ಬಳಿಯ ಶಾಂತಿಧಾಮದಲ್ಲಿ (ಅವರ ತೋಟದಲ್ಲಿ) ನಡೆಯಲಿದೆ.

😀
0
😍
0
😢
0
😡
0
👍
1
👎
0

Web Add
Prajapara News Kannada