Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ • 🔥
Advertisement

ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ

ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ

ಬೆಂಗಳೂರು: ಭಾರತಿ ಟೀಚರ್ 7th ಸ್ಟ್ಯಾಂಡರ್ಡ್ ಸಿನಿಮಾ ವಿಮರ್ಶೆ. ಶಿಕ್ಷಣ, ಶಿಕ್ಷಕರ ತ್ಯಾಗ ಮತ್ತು ಸಮಾಜಮುಖಿ ಸಂದೇಶ ಹೇಳುವ ಹೃದಯಸ್ಪರ್ಶಿ ಕನ್ನಡ ಚಿತ್ರ.ಇತ್ತೀಚಿನ ಕನ್ನಡ ಚಿತ್ರರಂಗದಲ್ಲಿ ಸಮಾಜದ ನೆಲದ ಸತ್ಯಗಳನ್ನು ಸ್ಪರ್ಶಿಸುವ ಚಿತ್ರಗಳು ವಿರಳ. ಆ ಸಾಲಿನಲ್ಲಿ ಗಮನ ಸೆಳೆಯುವ ಪ್ರಯತ್ನ ಮಾಡಿರುವ ಚಿತ್ರವೇ ಭಾರತಿ ಟೀಚರ್ : 7th ಸ್ಟ್ಯಾಂಡರ್ಡ್. ಶಿಕ್ಷಣದ ಮಹತ್ವ, ಶಿಕ್ಷಕರ ತ್ಯಾಗ ಮತ್ತು ಮಕ್ಕಳ ಭವಿಷ್ಯದ ಕುರಿತಾದ ಜವಾಬ್ದಾರಿಯನ್ನು ಮನಮುಟ್ಟುವ ರೀತಿಯಲ್ಲಿ ಈ ಚಿತ್ರ ತೆರೆದಿಡುತ್ತದೆ.

ಚಿತ್ರವು ಭಾರತಿ ಎಂಬ ಸರ್ಕಾರಿ ಶಾಲೆಯ ಶಿಕ್ಷಕಿಯ ಬದುಕಿನ ಸುತ್ತ ತಿರುಗುತ್ತದೆ. ಗ್ರಾಮೀಣ ಹಿನ್ನೆಲೆಯ ಶಾಲೆಯಲ್ಲಿ ಮಕ್ಕಳನ್ನು ಓದಿಗೆ ಆಕರ್ಷಿಸುವುದು, ಪೋಷಕರ ನಿರ್ಲಕ್ಷ್ಯ, ವ್ಯವಸ್ಥೆಯ ಅಡಚಣೆಗಳು – ಇವೆಲ್ಲವನ್ನು ಎದುರಿಸುತ್ತಾ ಭಾರತಿ ತನ್ನ ವಿದ್ಯಾರ್ಥಿಗಳ ಬದುಕನ್ನು ರೂಪಿಸಲು ಹೋರಾಡುತ್ತಾಳೆ. ಶಿಕ್ಷಣವೆಂದರೆ ಕೇವಲ ಪಠ್ಯವಲ್ಲ, ಅದು ಜೀವನದ ದಾರಿ ಎಂಬ ಸಂದೇಶವನ್ನು ಚಿತ್ರ ಸ್ಪಷ್ಟವಾಗಿ ಸಾರುತ್ತದೆ.

ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ

ನಾಯಕಿ ಯಶಿಕಾ ಚೈರಾ ಭಾರತಿ ಪಾತ್ರದಲ್ಲಿ ಅತ್ಯಂತ ಸಹಜ ಅಭಿನಯ ನೀಡಿದ್ದಾರೆ. ಅವರ ಅಭಿನಯದಲ್ಲಿ ಅತಿರೇಕವಿಲ್ಲ, ಆದರೆ ಆಂತರಿಕ ನೋವು, ಹಠ ಮತ್ತು ಮಾನವೀಯತೆ ಸ್ಪಷ್ಟವಾಗಿ ಗೋಚರಿಸುತ್ತದೆ. ಹಿರಿಯ ನಟ ಸಿಹಿ-ಕಹಿ ಚಂದ್ರು ಅವರ ಪಾತ್ರ ಚಿತ್ರಕ್ಕೆ ಭಾರ ನೀಡುತ್ತದೆ. ಮಕ್ಕಳ ಪಾತ್ರಗಳಲ್ಲಿ ಅಭಿನಯಿಸಿರುವ ಕಲಾವಿದರು ಕಥೆಗೆ ಜೀವ ತುಂಬಿದ್ದಾರೆ.

ನಿರ್ದೇಶಕ ಎಂ.ಎಲ್. ಪ್ರಸನ್ನ ಅವರ ನಿರೂಪಣೆ ವಾಸ್ತವಿಕವಾಗಿದೆ. ಉಪದೇಶದ ಸ್ವರ ತಪ್ಪಿಸಿ, ಕಥೆಯೊಳಗೇ ಸಂದೇಶವನ್ನು ನಯವಾಗಿ ಹೇರಿರುವುದು ಚಿತ್ರದ ಪ್ಲಸ್ ಪಾಯಿಂಟ್. ಕೆಲವೆಡೆ ಕಥನ ನಿಧಾನಗತಿಯಾಗಿದರೂ, ಚಿತ್ರದ ಉದ್ದೇಶವನ್ನು ಗಮನಿಸಿದರೆ ಅದು ಸಹಜವೆನಿಸುತ್ತದೆ.

ಸಿನೆಮಾಟೋಗ್ರಫಿ ಗ್ರಾಮೀಣ ವಾತಾವರಣವನ್ನು ನೈಜವಾಗಿ ಹಿಡಿದಿಟ್ಟಿದೆ. ಹಿನ್ನೆಲೆ ಸಂಗೀತ ಭಾವನಾತ್ಮಕ ದೃಶ್ಯಗಳಿಗೆ ಸೂಕ್ತ ಬೆಂಬಲ ನೀಡುತ್ತದೆ. “ಬಾ ಬಾ ಕನ್ನಡಿಗ” ಸೇರಿದಂತೆ ಕೆಲವು ಹಾಡುಗಳು ಗಮನ ಸೆಳೆಯುತ್ತವೆ.

ಇದನ್ನೂ ಓದಿ: ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ

ಒಟ್ಟಾರೆ, ಭಾರತಿ ಟೀಚರ್ ಮನರಂಜನೆಯ ಜೊತೆಗೆ ಚಿಂತನೆಗೆ ದಾರಿ ಮಾಡಿಕೊಡುವ ಚಿತ್ರ. ಇದು ಕಮರ್ಷಿಯಲ್ ಅಂಶಗಳಿಗಿಂತ ವಿಷಯಕ್ಕೆ ಹೆಚ್ಚಿನ ಒತ್ತು ನೀಡುವ ಸಿನಿಮಾ. ಶಿಕ್ಷಕರು, ಪೋಷಕರು ಹಾಗೂ ಅರ್ಥಪೂರ್ಣ ಚಿತ್ರಗಳನ್ನು ಇಷ್ಟಪಡುವ ಪ್ರೇಕ್ಷಕರಿಗೆ ಇದು ನೋಡಲೇಬೇಕಾದ ಚಿತ್ರ ಅನ್ನೊದೇ ಫಿಲ್ಮೀಮಾತು

😀
0
😍
0
😢
0
😡
0
👍
1
👎
0

Web Add
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
Prajapara News Kannada