Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಚಿನ್ನ ನಷ್ಟ ಪ್ರಕರಣ: ಮಲೆಯಲ್ಲಿ  SIT ಪರಿಶೀಲನೆ

ಚಿನ್ನ ನಷ್ಟ ಪ್ರಕರಣ: ಮಲೆಯಲ್ಲಿ  SIT ಪರಿಶೀಲನೆ

ತಿರುವನಂತಪುರಂ: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಆವರಣ (ಗೋಲ್ಡ್ ಕ್ಲ್ಯಾಡಿಂಗ್) ಸಂಬಂಧಿಸಿದಂತೆ ವಿಕ್ರಮ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ (VSSC) ತಯಾರಿಸಿದ ವೈಜ್ಞಾನಿಕ ವರದಿಯನ್ನು ಕೇರಳ ವಿಜಿಲೆನ್ಸ್ ನ್ಯಾಯಾಲಯವು ಶಬರಿಮಲೆ ಚಿನ್ನ ನಷ್ಟ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ಹಸ್ತಾಂತರಿಸಿದೆ.


ಕೇರಳ ಹೈಕೋರ್ಟ್ ಆದೇಶದ ಮೇರೆಗೆ ಈ ವೈಜ್ಞಾನಿಕ ವಿಶ್ಲೇಷಣೆ ನಡೆಸಲಾಗಿದ್ದು, ದೇವಾಲಯದ ವಿವಿಧ ಆಭರಣಗಳು ಮತ್ತು ಪವಿತ್ರ ವಸ್ತುಗಳ ಮೇಲೆ ಪುನರುದ್ದಾರ ಕಾರ್ಯಕ್ಕೆ ಮೊದಲು ಹಾಗೂ ನಂತರ ಅಳವಡಿಸಲಾದ ಚಿನ್ನದ ಪ್ರಮಾಣವನ್ನು ಹೋಲಿಕೆ ಮಾಡಲಾಗಿದೆ. ಚಿನ್ನದ ದಪ್ಪ, ಶುದ್ಧತೆ ಮತ್ತು ಬಳಕೆಯ ಪ್ರಮಾಣದ ಬಗ್ಗೆ ವೈಜ್ಞಾನಿಕ ದೃಢೀಕರಣ ಪಡೆಯುವುದೇ ಈ ಅಧ್ಯಯನದ ಮುಖ್ಯ ಉದ್ದೇಶವಾಗಿತ್ತು.


ನ್ಯಾಯಾಲಯದ ನಿರ್ದೇಶನದಂತೆ ವರದಿಯನ್ನು ಸ್ವೀಕರಿಸಿದ SIT, ಅದರ ಅಂಶಗಳನ್ನು ಪರಿಶೀಲಿಸಿ ಮುಂದಿನ ತನಿಖಾ ಕ್ರಮಗಳನ್ನು ಕೈಗೊಳ್ಳಲಿದೆ. ತನಿಖೆಯ ಪ್ರಗತಿ ಮತ್ತು ವರದಿಯ ಆಧಾರದ ಮೇಲೆ ಕೈಗೊಳ್ಳುವ ಕ್ರಮಗಳ ಕುರಿತು ಶೀಘ್ರದಲ್ಲೇ ಕೇರಳ ಹೈಕೋರ್ಟ್‌ಗೆ ವಿವರ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ


ಶಬರಿಮಲೆ ದೇವಾಲಯದಲ್ಲಿ ಚಿನ್ನದ ಬಳಕೆ ಹಾಗೂ ಅದರ ಲೆಕ್ಕಪತ್ರಗಳ ಬಗ್ಗೆ ಹಲವು ವರ್ಷಗಳಿಂದ ವಿವಾದಗಳು ನಡೆಯುತ್ತಿದ್ದು, ಈ ವೈಜ್ಞಾನಿಕ ವರದಿ ಪ್ರಕರಣಕ್ಕೆ ಮಹತ್ವದ ಸಾಕ್ಷಿಯಾಗಿ ಪರಿಗಣಿಸಲಾಗಿದೆ. ಈ ವರದಿ ಶಬರಿಮಲೆ ಚಿನ್ನ ನಷ್ಟ ಪ್ರಕರಣದ ತನಿಖೆಗೆ ಹೊಸ ತಿರುವು ನೀಡುವ ಸಾಧ್ಯತೆ ಇದೆ ಎಂಬ ಚರ್ಚೆ ಎಬ್ಬಿದೆ.

Web Add
Prajapara News Kannada