Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಸಂತಪೂರದಲ್ಲಿ ಕಾಲೇಜಿನಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಸಂತಪೂರದಲ್ಲಿ ಕಾಲೇಜಿನಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಬೀದರ್: ಜಿಲ್ಲೆಯ 12ನೇ ಶತಮಾನದ ಶರಣರಲ್ಲಿ ಒಬ್ಬರಾದ ಶಿವಯೋಗಿ ಸಿದ್ದರಾಮೇಶ್ವರರು ಜಾತಿರಹಿತ, ಮಾನವೀಯ ಮೌಲ್ಯಗಳಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಶ್ರಮಿಸಿ ಸಮಾನತೆಯ ಸಂದೇಶವನ್ನು ಸಾರಿದ ಮಹಾನ್ ಚಿಂತಕರಾಗಿದ್ದಾರೆ ಎಂದು ಸಂತಪೂರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಿದ್ಧಾರೆಡ್ಡಿ ಬಿರಾದರ್ ಹೇಳಿದರು.

ಸಂತಪೂರದ ಶಿವಯೋಗಿ ಸಿದ್ದರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಸಮಾನತೆ, ಮಾನವೀಯತೆ ಮತ್ತು ಶೋಷಣೆಯ ವಿರುದ್ಧದ ಚಿಂತನೆಗಳನ್ನು ವಚನಗಳ ಮೂಲಕ ಜನರಿಗೆ ತಲುಪಿಸಿದ ಶಿವಯೋಗಿ ಸಿದ್ದರಾಮೇಶ್ವರರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಮಾತನಾಡಿ, “‘ಕೆಲಸವೇ ದೇವರು’ ಎಂಬ ತತ್ತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡ ಕರ್ಮಯೋಗಿಯಾಗಿದ್ದ ಶಿವಯೋಗಿ ಸಿದ್ದರಾಮೇಶ್ವರರು ಕಲ್ಯಾಣ ಕ್ರಾಂತಿ ಹಾಗೂ ವಚನಗಳ ಮೂಲಕ ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ಧೈರ್ಯವಾಗಿ ವಿರೋಧಿಸಿ ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಕಿರಣಕುಮಾರ ಬಿರಾದರ್, ಉಪನ್ಯಾಸಕರಾದ ಮಹಾಂತೇಶ ಪಾಂಚಾಳ, ಸುರೇಶ್ ಬಂಡೆ, ರಾಜಕುಮಾರ ಹಳ್ಳಿಕರ್, ಸಂತೋಷ್ ಧೂಳ್ಗೆಂಡೆ, ಸುಧೀರ್ ಅಲೂರೆ, ಪ್ರಿಯಾಂಕಾ ಗೊನ್ನಳಿಕರ್ ಹಾಗೂ ಮೀರಾತಾಯಿ ಕಾಂಬಳೆ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ರೇಣುಕಾ ಅನಿಲಕುಮಾರ, ಗೀತಾ ನರಸಪ್ಪ ಮತ್ತು ವೈಷ್ಣವಿ ಸಿದ್ದಪ್ಪ ಅವರನ್ನು ಪ್ರತಿಭಾವಂತ ವಿದ್ಯಾರ್ಥಿಗಳಾಗಿ ಸನ್ಮಾನಿಸಲಾಯಿತು.

😀
0
😍
0
😢
0
😡
0
👍
1
👎
0

Web Add
Prajapara News Kannada