Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್: ರೈತರಿಗೆ ಪರಿಹಾರ ಕೊಡಿ; ಜಿಲ್ಲಾಧಿಕಾರಿಗೆ ಮನವಿ

ಬೀದರ್: ರೈತರಿಗೆ ಪರಿಹಾರ ಕೊಡಿ; ಜಿಲ್ಲಾಧಿಕಾರಿಗೆ ಮನವಿ

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಚಟ್ನಾಳ ಗ್ರಾಮದ ಸುಮಾರು 70 ರೈತರಿಗೆ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿ ಪರಿಹಾರ ಇನ್ನೂ ಜಮೆಯಾಗದಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರು, ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹2,950 ದರ ನಿಗದಿಪಡಿಸಿ, ಪ್ರತಿ 15 ದಿನಕ್ಕೊಮ್ಮೆ ರೈತರ ಖಾತೆಗೆ ಹಣ ಪಾವತಿಸುವುದಾಗಿ ನೀಡಿದ ಆಶ್ವಾಸನೆಯನ್ನು ಪಾಲಿಸುತ್ತಿಲ್ಲ ಎಂದು ಆರೋಪಿಸಿದರು. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ಹಲವಾರು ರೈತರಿಗೆ ಇನ್ನೂ ಪರಿಹಾರ ಜಮೆಯಾಗಿಲ್ಲ. ಈ ವಿಷಯವನ್ನು ತುರ್ತುವಾಗಿ ಮರುಪರಿಶೀಲಿಸಿ ರೈತರಿಗೆ ಶೀಘ್ರ ಪರಿಹಾರ ವಿತರಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ


ಇದಲ್ಲದೆ, ಜಿಲ್ಲಾದ್ಯಂತ ಕಬ್ಬು ಕಟಾವು ಮಾಡಲು ಕೂಲಿ ಕಾರ್ಮಿಕರ ಕೊರತೆ, ಬೆಳೆ ವಿಮೆ ಪರಿಹಾರದ ವಿಳಂಬ, ತೊಗರಿ ಖರೀದಿ ಕೇಂದ್ರಗಳನ್ನು ತಕ್ಷಣ ಆರಂಭಿಸುವ ಅಗತ್ಯ, ಹಾಗೂ ಹೊರ ರಾಜ್ಯಗಳಿಂದ ಕಬ್ಬು ತರದಂತೆ ನಿರ್ಬಂಧ ವಿಧಿಸಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಿದರು. ಜೊತೆಗೆ, ಎಪಿಎಂಸಿಗಳಲ್ಲಿ ನಡೆಯುತ್ತಿರುವ ಅಕ್ರಮ ಕಡತ ಹಾಗೂ ಕಮಿಷನ್ ವಸೂಲಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ, ಜಿಲ್ಲಾ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಸೇರಿದಂತೆ ಬಾಬು ಮಾದಪ್ಪಾ, ರಾಜಕುಮಾರ ಪಾಟೀಲ, ಪ್ರಕಾಶ ಬಾವಗೆ, ಗಣಪತಿ ಕಾಶೆಪ್ಪಾ, ಶ್ರೀನಿವಾಸ ಶಾಮರಾವ, ಗುರುನಾಥ ಮಾಣಿಕರಾಯ ಸೇರಿದಂತೆ ಹಲವಾರು ರೈತ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ


ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading