Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಲ್ಯಾಂಡ್‌ಲಾರ್ಡ್‌ಗೆ ಪ್ರೇಕ್ಷಕರ ಶ್ಲಾಘನೆ

ಲ್ಯಾಂಡ್‌ಲಾರ್ಡ್‌ಗೆ ಪ್ರೇಕ್ಷಕರ ಶ್ಲಾಘನೆ

ಇಲ್ಲಿ ಯಾರು ಮುಖ್ಯರಲ್ಲ, ಯಾರು ಅಮುಖ್ಯರಲ್ಲ ಎನ್ನುವುದನ್ನೇ ಹೇಳುವ ಸಿನಿಮಾ

ಬೆಂಗಳೂರು:ಕನ್ನಡ ಚಿತ್ರರಂಗದಲ್ಲಿ ಕೆಲವೊಮ್ಮೆ ಮಾತ್ರ ಇಂಥ ಸಿನಿಮಾಗಳು ಬರುತ್ತವೆ. ಹೀರೋ ಮಾತ್ರವೇ ಕಥೆಯ ಕೇಂದ್ರವಾಗದೆ, ಕಥೆಯೇ ಹೀರೋ ಆಗಿ ನಿಲ್ಲುವ ಚಿತ್ರಗಳು. ನಿರ್ದೇಶಕ–ಬರಹಗಾರ ಜಡೇಶ್ ಕೆ ಹಂಪಿ ಅವರ ‘ಲ್ಯಾಂಡ್‌ಲಾರ್ಡ್’ ಅಂಥದೇ ಒಂದು ಪ್ರಯತ್ನ. ಬಿಡುಗಡೆಯಾದ ದಿನದಿಂದಲೇ ಈ ಸಿನಿಮಾ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು, “ರೊಚ್ಚಿಗೆದ್ದ ಸಿನಿಮಾ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಜಡೇಶ್ ಕೆ ಹಂಪಿ ಅವರ ಸಿನಿ ಪಯಣವನ್ನು ನೋಡಿದರೆ ಈ ಯಶಸ್ಸು ಅಚ್ಚರಿಯಲ್ಲ. ‘ಜಂಟಲ್‌ಮ್ಯಾನ್’ ಮೂಲಕ ಆರಂಭವಾದ ಅವರ ಕಥಾ ಪಯಣ ‘ಗುರುಶಿಷ್ಯರು’, ‘ಕಾಟೇರ’ ಮೂಲಕ ಗಟ್ಟಿಯಾಗುತ್ತಾ ಬಂದಿದೆ. ಈಗ ‘ಲ್ಯಾಂಡ್‌ಲಾರ್ಡ್’ ಮೂಲಕ ಅವರು ಕಥೆ ಹೇಳುವ ತಮ್ಮದೇ ಶೈಲಿಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಪ್ರೇಕ್ಷಕರನ್ನು ಹಿಡಿದುಕೊಳ್ಳುವ ಬಿಗಿಯಾದ ಕಥೆ, ಸ್ಪಷ್ಟ ದೃಷ್ಟಿಕೋನ ಮತ್ತು ವಾಸ್ತವದ ನೆಲೆಯಲ್ಲೇ ನಿಲ್ಲುವ ನಿರೂಪಣೆ – ಈ ಮೂರು ಅಂಶಗಳೇ ಚಿತ್ರದ ಬಲ.

ಇದನ್ನೂ ಓದಿ: ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್

ಮಾಸ್ ಅಂದ್ರೆ ಕೇವಲ ಡೈಲಾಗ್ ಅಲ್ಲ
ಸಾಮಾನ್ಯವಾಗಿ ಮಾಸ್ ಸಿನಿಮಾಗಳು ಅಂದ್ರೆ ಜೋರಾದ ಡೈಲಾಗ್, ಎತ್ತರದ ಪಂಚ್‌ಗಳು ಎಂದುಕೊಳ್ಳಲಾಗುತ್ತದೆ. ಆದರೆ ‘ಲ್ಯಾಂಡ್‌ಲಾರ್ಡ್’ ಆ ಕಲ್ಪನೆಗೆ ಪ್ರಶ್ನೆ ಹಾಕುತ್ತದೆ. ಸಮಾಜದೊಳಗೆ ಮೌನವಾಗಿ ಬೆಳೆದು ಬಂದ ಅಸಮತೆ, ಶೋಷಣೆ, ನೋವುಗಳ ಬಗ್ಗೆ ನೇರವಾಗಿ ಮಾತನಾಡುವ ಸಂಭಾಷಣೆಗಳಿಗೆ ಚಿತ್ರಮಂದಿರಗಳಲ್ಲಿ ಸಿಗುತ್ತಿರುವ ಚಪ್ಪಾಳೆ, ವಿಷಲ್‌ಗಳೇ ಚಿತ್ರದ ದೊಡ್ಡ ಗೆಲುವು.
ಈ ಸಂಭಾಷಣೆಗಳಿಗೆ ಜೀವ ತುಂಬಿರುವವರು ಮಾಸ್ತಿ ಉಪ್ಪರಹಳ್ಳಿ.
“ಹುಲಿ ಸನ್ಯಾಸಿಯಾಗಿದೆ ಅಂದ್ರೆ
ಬೇಟೆಯಾಡೋದನ್ನ ಮರೆತಿದೆ ಅಂತಲ್ಲ…”
“ನೀರಿಗೆ ಪಾಚಿಯೇ ವೈರಿ ಇದ್ದಂಗೆ”
ಬಸವಿ–ಇಸವಿ, ಸಂಧಾನ–ಸಂವಿಧಾನ ಹೀಗೆ ಸ್ಥಳೀಯ ಸೊಗಡಿನ ಪದಗಳ ಬಳಕೆ ಸಿನಿಮಾಕ್ಕೆ ನೈಜತೆಯನ್ನು ತಂದಿದೆ.

ದುನಿಯಾ ವಿಜಯ್ – ಟೀಕೆಗಳಿಗೆ ಉತ್ತರ
‘ಸಲಗ’, ‘ಭೀಮ’ ಬಳಿಕ ದುನಿಯಾ ವಿಜಯ್ ಅವರ ಪಾತ್ರ ಆಯ್ಕೆ ಬಗ್ಗೆ ಕೇಳಿಬಂದ ಟೀಕೆಗಳಿಗೆ ‘ಲ್ಯಾಂಡ್‌ಲಾರ್ಡ್’ ಸ್ಪಷ್ಟ ಉತ್ತರ ನೀಡುತ್ತದೆ. ರೌಡಿ ಜಗತ್ತಿನ ಗಡಿಯಾಚೆ ನಿಂತು, ಸಂಪೂರ್ಣ ವಿಭಿನ್ನ ಸ್ವರೂಪದ ಪಾತ್ರವನ್ನು ಅವರು ಇಲ್ಲಿ ಹೊತ್ತುಕೊಂಡಿದ್ದಾರೆ.
ಚಪ್ಪಲಿಯ ಹಾರವನ್ನು ಕುತ್ತಿಗೆಗೆ ಹಾಕಿಕೊಂಡು ಅಭಿನಯಿಸುವ ದೃಶ್ಯಗಳು, ಅವರ ನಟನೆಯ ತೂಕವನ್ನು ಮತ್ತಷ್ಟು ಹೆಚ್ಚಿಸಿವೆ. ಇದು ದುನಿಯಾ ವಿಜಯ್ ತಮ್ಮನ್ನು ತಾವು ಕೇವಲ ಮಾಸ್ ಹೀರೋ ಎಂದು ಸೀಮಿತಗೊಳಿಸಿಕೊಳ್ಳದಿರುವುದರ ಸಾಕ್ಷಿ.

ಕಥೆ ಬಿದ್ದುಹೋಗದ ನಿರೂಪಣೆ
ಒಮ್ಮೆ ಕಥೆ ಶುರುವಾದರೆ ಅದು ಎಲ್ಲಿ ನಿಲ್ಲುತ್ತದೆ ಎಂಬ ಕುತೂಹಲ ಕೊನೆವರೆಗೂ ಉಳಿಯುತ್ತದೆ. ಒಂದು ದೃಶ್ಯ ಕೊಟ್ಟ ರೋಮಾಂಚನ ಮುಗಿಯುವ ಮೊದಲೇ ಮತ್ತೊಂದು ತಿರುವು ಎದುರಾಗುತ್ತದೆ. ಈ ಬಿಗಿತದ ಕಥನ ಶೈಲಿ ‘ಕಾಟೇರ’ ನೆನಪಿಸಿದರೂ, ಇಲ್ಲಿ ಅದೇ ಮಾದರಿಯನ್ನು ಮತ್ತಷ್ಟು ಪಕ್ವವಾಗಿ ಬಳಸಲಾಗಿದೆ.
ಅಸುರನ್, ಕರ್ಣನ್ ತರಹದ ಸಿನಿಮಾಗಳ ಛಾಯೆ ಕಂಡರೂ, ಅದು ಕಥೆಯ ಶಕ್ತಿಗೆ ಸಿಗುವ ಪ್ರಶಂಸೆಯಂತೆಯೇ ಕಾಣುತ್ತದೆ.

ಕೋಲಾರ–ಚಿಂತಾಮಣಿ ಭಾಷೆಯ ಜೀವಂತಿಕೆ
ಚಿತ್ರದ ಮತ್ತೊಂದು ದೊಡ್ಡ ಶಕ್ತಿ ಅಂದರೆ ಕೋಲಾರ–ಚಿಂತಾಮಣಿ ಭಾಗದ ಕನ್ನಡದ ಸೊಗಡು. ಎಲ್ಲ ಪಾತ್ರಗಳೂ ಒಂದೇ ಭಾಷಾ ಲಹರಿಯಲ್ಲಿ ಮಾತನಾಡುವುದರಿಂದ, ಪ್ರೇಕ್ಷಕರು ಕಥೆಯೊಳಗೆ ತಾವೇ ಸೇರಿಕೊಂಡಂತೆ ಭಾಸವಾಗುತ್ತದೆ. ಇದು ಸಿನಿಮಾವನ್ನು ಇನ್ನಷ್ಟು ನೆಲಮಟ್ಟದ ಅನುಭವವಾಗಿಸುತ್ತದೆ.

ಇದನ್ನೂ ಓದಿ: ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ

ಎಲ್ಲರಿಗೂ ತೂಕವಿರುವ ಪಾತ್ರಗಳು
ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ, ರಾಕೇಶ್ ಅಡಿಗ, ಶಿಶಿರ್ ಬೈಕಾಡಿ, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಉಮಾಶ್ರೀ, ಭಾವನಾ, ಶರತ್ ಲೋಹಿತಾಶ್ವ, ಮಿತ್ರ, ಬಿ.ಎಂ. ಗಿರಿರಾಜ್, ಅವಿನಾಶ್ – ದೊಡ್ಡ ತಾರಾಬಳಗ ಇದ್ದರೂ ಇಲ್ಲಿ ಯಾರೂ ಅಮುಖ್ಯರಲ್ಲ.ಪ್ರತಿಯೊಬ್ಬ ಪಾತ್ರಕ್ಕೂ ಕಥೆಯಲ್ಲಿ ಕಾರಣವಿದೆ, ಅರ್ಥವಿದೆ. ದುನಿಯಾ ವಿಜಯ್ ಅವರ ಪುತ್ರಿ ರಿತನ್ಯಾ ಮೊದಲ ಸಿನಿಮಾದಲ್ಲೇ ಗಮನ ಸೆಳೆದಿದ್ದಾರೆ. ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರಕ್ಕೆ ಸೂಕ್ತ ಬೆಂಬಲ ನೀಡಿದೆ.
ಮನರಂಜನೆ ಮಾತ್ರವಲ್ಲ, ವಿಚಾರವೂ ಇದೆ ಕೆಲವು ಸಿನಿಮಾಗಳು ಕೇವಲ ಮನರಂಜನೆಗಾಗಿ. ಕೆಲವು ಸಂದೇಶ ಹೇಳಲು. ಇನ್ನೂ ಕೆಲವು ನಮ್ಮ ಅರಿವನ್ನು ವಿಸ್ತರಿಸಲು. ಆದರೆ ಈ ಎಲ್ಲವನ್ನೂ ಒಂದೇ ಸಿನಿಮಾದಲ್ಲಿ ಸಮತೋಲನದಿಂದ ನೀಡುವುದು ಸುಲಭದ ಕೆಲಸವಲ್ಲ. ‘ಲ್ಯಾಂಡ್‌ಲಾರ್ಡ್’ ಅದನ್ನು ಸಾಧ್ಯವಾಗಿಸಿದೆ.
ಬಾಕ್ಸ್ ಆಫೀಸ್ ಸಂಖ್ಯೆಗಳಿಗಿಂತ ಸಿನಿಮಾ ಮುಗಿದ ಮೇಲೆ ಉಳಿಯುವ ಅನುಭವವೇ ಮುಖ್ಯ ಎನ್ನುವವರಿಗೆ ಇದು ಖಂಡಿತಾ ನೋಡಲೇಬೇಕಾದ ಸಿನಿಮಾ.

ಕನ್ನಡಕ್ಕೆ ಇಂಥ ಗಟ್ಟಿ, ವಿಚಾರಪೂರ್ಣ ಹಾಗೂ ಮಾಸ್ ಅಪೀಲ್ ಇರುವ ಸಿನಿಮಾ ಕೊಟ್ಟಿದ್ದಕ್ಕಾಗಿ ಸಿನಿಪ್ರೇಮಿಗಳು ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

😀
0
😍
0
😢
0
😡
0
👍
0
👎
0

Web Add
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
Prajapara News Kannada