Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
Advertisement

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಸುನಿಲ್ ಕುಮಾರ್ ಬಜಾಲ್

ಲೇಬರ್ ಕೋಡ್ ಹೆಸರಿನಲ್ಲಿ ಕಾರ್ಪೊರೇಟ್ ಕೋಡ್ ಜಾರಿ – ಸುನಿಲ್ ಕುಮಾರ್ ಬಜಾಲ್

ಮುಲ್ಕಿ:ಕೇಂದ್ರ ಸರ್ಕಾರವು ಕಾರ್ಮಿಕರ ಹಕ್ಕುಗಳನ್ನು ನಾಶಪಡಿಸಿ ಬಂಡವಾಳಶಾಹಿಗಳ ಹಿತಾಸಕ್ತಿಗಳನ್ನು ರಕ್ಷಿಸುವ ಉದ್ದೇಶದಿಂದ ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ಇದನ್ನು ಲೇಬರ್ ಕೋಡ್ ಎಂದು ಕರೆಯಲಾಗುತ್ತಿದ್ದರೂ ವಾಸ್ತವದಲ್ಲಿ ಇದು ಕಾರ್ಪೊರೇಟ್ ಕೋಡ್ ಆಗಿದೆ ಎಂದು CITU ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಫೆಬ್ರವರಿ 12ರಂದು ನಡೆಯಲಿರುವ ಆಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥವಾಗಿ ಮುಲ್ಕಿಯಿಂದ ಆರಂಭಗೊಂಡ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳುವ ನೀತಿಗಳನ್ನು ಅನುಸರಿಸುತ್ತಿದೆ. ಕಾರ್ಮಿಕ ಚಳುವಳಿಯನ್ನು ಹತ್ತಿಕ್ಕಿ, ದೇಶದ ಸಂಪತ್ತು ಕಾರ್ಪೊರೇಟ್ ಕಂಪನಿಗಳ ಕೈಗೆ ಒಪ್ಪಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ

ಮುಂದುವರಿದು ಮಾತನಾಡಿದ ಅವರು, ರೈತ ವಿರೋಧಿ ಬೀಜ ಮಸೂದೆ ಹಾಗೂ ವಿದ್ಯುತ್ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಎಲ್ಲಾ ಕ್ಷೇತ್ರಗಳ ಖಾಸಗೀಕರಣದ ಮೂಲಕ ಇಡೀ ದೇಶವನ್ನೇ ಕಾರ್ಪೊರೇಟ್ ಸಂಸ್ಥೆಗಳ ಪಾದತಲಕ್ಕೆ ಒಪ್ಪಿಸಲು ಸನ್ನದ್ಧವಾಗಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ CITU ಜಿಲ್ಲಾ ನಾಯಕ ಯೋಗೀಶ್ ಜಪ್ಪಿನಮೊಗರು, ಗ್ರಾಮೀಣ ಜನತೆಯ ಬದುಕಿಗೆ ಆಧಾರವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿದ್ದುಪಡಿ ತಂದು ಅದನ್ನು ಸರ್ವನಾಶಗೊಳಿಸುವ ಯತ್ನ ನಡೆಯುತ್ತಿದೆ. ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು ಜನಸಾಮಾನ್ಯರ ಬದುಕನ್ನೇ ಸಂಕಷ್ಟಕ್ಕೆ ದೂಡಿವೆ ಎಂದು ಟೀಕಿಸಿದರು.

ಪಾದಯಾತ್ರೆಯ ಉದ್ಘಾಟನೆಯ ಸಂದರ್ಭ ಸುನಿಲ್ ಕುಮಾರ್ ಬಜಾಲ್ ಅವರು ಕೆಂಬಾವುಟವನ್ನು ಜಾಥಾ ತಂಡದ ನಾಯಕ ಬಿ.ಕೆ. ಇಮ್ತಿಯಾಜ್ ಹಾಗೂ ಉಪನಾಯಕರಾದ ಜಯಲಕ್ಷ್ಮಿ, ರವಿಚಂದ್ರ ಕೊಂಚಾಡಿ, ಶ್ರೀನಾಥ ಕಾಟಿಪಳ್ಳ, ತಯ್ಯುಬ್ ಬೆಂಗರೆ, ಪ್ರಮೀಳಾ ಶಕ್ತಿನಗರ ಮತ್ತು ಸಾಧಿಕ್ ಮುಲ್ಕಿ ಅವರಿಗೆ ಹಸ್ತಾಂತರಿಸಿ ಪಾದಯಾತ್ರೆಗೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಜನಪರ ಹೋರಾಟಗಾರ ಮುನೀರ್ ಕಾಟಿಪಳ್ಳ, ಪ್ರಗತಿಪರ ಚಿಂತಕ ಡಾ. ಕೃಷ್ಣಪ್ಪ ಕೊಂಚಾಡಿ, ವಿಮಾ ಪ್ರತಿನಿಧಿ ಸಂಘಟನೆಯ ಜಿಲ್ಲಾ ನಾಯಕ ರಾಜನ್ ಡಿ ಕೋಸ್ತಾ, CITU ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ದಿನೇಶ್ ಶೆಟ್ಟಿ, ಸಂತೋಷ್ ಆರ್.ಎಸ್., ಅಶೋಕ್ ಶ್ರೀಯಾನ್, ನಾಗೇಶ್ ಕೋಟ್ಯಾನ್, ಯುವಜನ ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ಆದಿವಾಸಿ ಸಂಘಟನೆಯ ಜಿಲ್ಲಾ ನಾಯಕರಾದ ಕರಿಯ ಕೆ., ಶೇಖರ್ ವಾಮಂಜೂರು, ಕೃಷ್ಣ ಇನ್ನಾ, ದಲಿತ ಸಂಘಟನೆಯ ಮುಖಂಡ ಕೃಷ್ಣ ತಣ್ಣೀರುಬಾವಿ, ಮಹಿಳಾ ಮುಖಂಡರಾದ ಅಸುಂತ ಡಿಸೋಜ, ಯೋಗಿತಾ, ರೋಹಿಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ

ನೂರಕ್ಕೂ ಹೆಚ್ಚು ಕಾರ್ಯಕರ್ತರು ಕೇಂದ್ರ ಸರ್ಕಾರದ ರೈತ–ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ಪಾದಯಾತ್ರೆಯಲ್ಲಿ ಭಾಗವಹಿಸಿದರು.

😀
0
😍
0
😢
0
😡
0
👍
0
👎
0

Web Add
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ನಾಗಮೋಹನದಾಸ್ ವಿರುದ್ಧ ಕ್ರಿಮಿನಲ್ ಪ್ರಕರಣಕ್ಕೆ ಒತ್ತಾಯ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಇಂದು ಐಪಿಎಲ್ ಹಬ್ಬ ಪ್ರಾರಂಭ : RCB, CSK,MI ವಿಶೇಷ ಗಮನ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಉಳ್ಳಾಲ:ಅಪರಾಧ ಹಿನ್ನೆಲೆಯ ವ್ಯಕ್ತಿ ಹತ್ಯೆ: ಬೈಕ್ ಅಡ್ಡಗಟ್ಟಿ ದಾಳಿ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
Prajapara News Kannada