Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಫೆ.12 ಮಹಾ ಮುಷ್ಕರಕ್ಕೆ ಬಂದರು ಹಮಾಲಿ ಕಾರ್ಮಿಕರ ಬೆಂಬಲ

ಫೆ.12 ಮಹಾ ಮುಷ್ಕರಕ್ಕೆ ಬಂದರು ಹಮಾಲಿ ಕಾರ್ಮಿಕರ ಬೆಂಬಲ

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 12ರ ಅಖಿಲ ಭಾರತ ಸಾರ್ವತ್ರಿಕ ಕಾರ್ಮಿಕರ ಮುಷ್ಕರಕ್ಕೆ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಬೆಂಬಲ ವ್ಯಕ್ತಪಡಿಸಿದ್ದಾರೆ. ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಇಂದು ಹಳೆ ಬಂದರಿನ ಕಾರ್ಮಿಕರ ಕಟ್ಟೆ ಬಳಿ ಸಭೆ ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್, ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಶೈತ್ಯಾಗಾರದಲ್ಲಿ ಇಟ್ಟಿದ್ದು, ಕಾರ್ಮಿಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ದೇಶದ ದುಡಿಯುವ ಜನರು ಒಂದಾಗಿ ಈ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಬೇಕಾಗಿದೆ ಎಂದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರ ಹಿತಾಸಕ್ತಿಗಳನ್ನು ಬಲಿಗೊಡುತ್ತಿದೆ ಎಂದು ಟೀಕಿಸಿದರು.
ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಫಾರೂಕ್ ಉಳ್ಳಾಲಬೈಲ್, ಖಜಾಂಜಿ ಶಮೀರ್ ಬೋಳಿಯಾರ್ ಹಾಗೂ ಪ್ರಮುಖರಾದ ಮಜೀದ್ ಉಳ್ಳಾಲಬೈಲ್, ಮೋಹನ್ ಕುಂಪಲ, ಅನಿಲ್, ಪದ್ಮನಾಭ, ಸಿದ್ದಿಕ್ ಬೆಂಗ್ರೆ, ಸಿರಾಜ್, ಶರಣಪ್ಪ, ಬಷೀರ್ ಪಾವೂರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫೆಬ್ರವರಿ 12ರಂದು ಹಳೆ ಬಂದರು ಸಗಟು ಮಾರುಕಟ್ಟೆ ಬಂದ್

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಅಖಿಲ ಭಾರತ ಕಾರ್ಮಿಕರ ಮುಷ್ಕರಕ್ಕೆ ಬೆಂಬಲವಾಗಿ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಕೆಲಸ ನಿಲ್ಲಿಸಲಿರುವುದರಿಂದ ಆ ದಿನ ಮಾರುಕಟ್ಟೆಯಲ್ಲಿ ಲೋಡಿಂಗ್ ಹಾಗೂ ಅನ್ಲೋಡಿಂಗ್ ಕಾರ್ಯಗಳು ನಡೆಯುವುದಿಲ್ಲ. ಪರಿಣಾಮವಾಗಿ ಸಗಟು ಮಾರುಕಟ್ಟೆ ವ್ಯವಹಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಲಾರಿ ಮತ್ತು ಟೆಂಪೋ ಮಾಲಕರು, ಬಂದರು ವ್ಯಾಪಾರಿಗಳು ಹಾಗೂ ಗ್ರಾಹಕರು ಸಹಕರಿಸುವಂತೆ ಬಂದರು ಶ್ರಮಿಕರ ಸಂಘದ ಅಧ್ಯಕ್ಷ ಬಿ.ಕೆ. ಇಮ್ತಿಯಾಜ್ ಮನವಿ ಮಾಡಿದ್ದಾರೆ.

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading