Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ. ರಮಾನಾಥ ರೈ

ಕರಾವಳಿ ಅಭಿವೃದ್ಧಿಗೆ ಮಹತ್ವ ನೀಡಿದ ರಾಜ್ಯ ಬಜೆಟ್ – ಬಿ. ರಮಾನಾಥ ರೈ

ಮಂಗಳೂರು: ಕರ್ನಾಟಕ ಸರ್ಕಾರ ಮಂಡಿಸಿರುವ ಇತ್ತೀಚಿನ ರಾಜ್ಯ ಬಜೆಟ್ ಜನಪರ ಹಾಗೂ ಅಭಿವೃದ್ಧಿ ಪರವಾಗಿದ್ದು, ಸಮಾಜದ ವಿವಿಧ ವರ್ಗಗಳ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಬಿ. ರಮಾನಾಥ ರೈ ತಿಳಿಸಿದ್ದಾರೆ.

ರಾಜ್ಯದ ರೈತರು, ಮಹಿಳೆಯರು, ಯುವಕರು ಹಾಗೂ ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿದ ಯೋಜನೆಗಳು ಸ್ವಾಗತಾರ್ಹವಾಗಿವೆ ಎಂದು ಅವರು ಹೇಳಿದ್ದಾರೆ. ಕೃಷಿ, ಶಿಕ್ಷಣ, ವಸತಿ, ಆರೋಗ್ಯ, ಅರಣ್ಯ, ಮುಜರಾಯಿ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಅದೇ ರೀತಿ ಕರಾವಳಿ ಕರ್ನಾಟಕದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರವಾಸೋದ್ಯಮ, ಮೀನುಗಾರಿಕೆ ಹಾಗೂ ಪೊಲೀಸ್ ಠಾಣೆಗಳ ಬಲವರ್ಧನೆ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ. ಇದರಿಂದ ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ರಾಜ್ಯದ ಸಮಗ್ರ ಅಭಿವೃದ್ಧಿಯ ಜೊತೆಗೆ ಕರಾವಳಿ ಭಾಗದ ಪ್ರಗತಿಗೂ ಈ ಬಜೆಟ್ ಮಹತ್ವದ ಪಾತ್ರ ವಹಿಸಲಿದೆ ಎಂದು ಬಿ. ರಮಾನಾಥ ರೈ ವಿಶ್ವಾಸ ವ್ಯಕ್ತಪಡಿಸಿದರು.

😀
0
😍
0
😢
0
😡
0
👍
1
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading