Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ವಿಜಯಪುರದಲ್ಲಿ ‘ಸಂವಿಧಾನ ಹಬ್ಬ–2026’: ಏಪ್ರಿಲ್ 11ರಿಂದ ನಾಲ್ಕು ದಿನಗಳ ಕಾರ್ಯಕ್ರಮ

ವಿಜಯಪುರದಲ್ಲಿ ‘ಸಂವಿಧಾನ ಹಬ್ಬ–2026’: ಏಪ್ರಿಲ್ 11ರಿಂದ ನಾಲ್ಕು ದಿನಗಳ ಕಾರ್ಯಕ್ರಮ

ವಿಜಯಪುರ: ಸಂವಿಧಾನದ ಮೌಲ್ಯಗಳು, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶವನ್ನು ಸಮಾಜದ ಎಲ್ಲ ವರ್ಗಗಳಿಗೂ ತಲುಪಿಸುವ ಉದ್ದೇಶದಿಂದ ವಿಜಯಪುರದಲ್ಲಿ “ಸಂವಿಧಾನ ಹಬ್ಬ–2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಸವಣ್ಣ, ಜ್ಯೋತಿಬಾ–ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್ ಹಾಗೂ ಬಾಬಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ಜನರಿಗೆ ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಕಾರ್ಯಕ್ರಮದ ಅಂಗವಾಗಿ ವಿಚಾರ ಸಂಕಿರಣ, ಸಂವಾದ, ಚರ್ಚೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿವಿಧ ಕ್ಷೇತ್ರಗಳ ಬೌದ್ಧಿಕರು, ಸಾಮಾಜಿಕ ಕಾರ್ಯಕರ್ತರು ಹಾಗೂ ಯುವಕರು ಭಾಗವಹಿಸಲಿದ್ದಾರೆ. ಸಂವಿಧಾನದ ಮಹತ್ವ ಮತ್ತು ಅದರ ಮೌಲ್ಯಗಳನ್ನು ಸಮಾಜದಲ್ಲಿ ಬಲಪಡಿಸುವ ಕುರಿತು ವಿವಿಧ ಉಪನ್ಯಾಸಗಳು ನಡೆಯಲಿವೆ.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಏಪ್ರಿಲ್ 11 ರಿಂದ 14ರವರೆಗೆ ವಿಜಯಪುರ ನಗರದ ಕಂದಗಲ್‌ನ ಶ್ರೀ ಹನುಮಂತಾಯ ರಂಗಮಂದಿರದಲ್ಲಿ ಈ ನಾಲ್ಕು ದಿನಗಳ ಸಂವಿಧಾನ ಹಬ್ಬ ನಡೆಯಲಿದೆ. ಈ ಅವಧಿಯಲ್ಲಿ ವಿದ್ಯಾರ್ಥಿಗಳು, ಯುವಕರು ಮತ್ತು ಸಾರ್ವಜನಿಕರಿಗಾಗಿ ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಂವಿಧಾನದ ಆಶಯಗಳನ್ನು ಜನರಿಗೆ ತಿಳಿಸಲು ಮತ್ತು ಸಮಾನತೆ, ನ್ಯಾಯ ಹಾಗೂ ಮಾನವೀಯ ಮೌಲ್ಯಗಳ ಅರಿವು ಮೂಡಿಸಲು ಈ ಹಬ್ಬವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಸಂಪರ್ಕ: 9740420826, 7795219574, 9019261915.

😀
0
😍
0
😢
0
😡
0
👍
0
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading