Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಮಂಗಳೂರು : ಮೊಟ್ಟೆ ದರದಲ್ಲಿ ಭಾರೀ ಕುಸಿತ

ಮಂಗಳೂರು : ಮೊಟ್ಟೆ ದರದಲ್ಲಿ ಭಾರೀ ಕುಸಿತ

ಮಂಗಳೂರು: ಗಲ್ಫ್ ದೇಶಗಳಿಗೆ ಮೊಟ್ಟೆ ರಫ್ತು ತಾತ್ಕಾಲಿಕವಾಗಿ ಸ್ಥಗಿತಗೊಂಡ ಪರಿಣಾಮ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಹಲವೆಡೆ ಮೊಟ್ಟೆ ದರದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಮೊದಲು ಒಂದು ಮೊಟ್ಟೆಯ ಹೊಲ್ಸೇಲ್ ದರ ಸುಮಾರು ₹7.6 ಇದ್ದದ್ದು ಈಗ ಸುಮಾರು ₹5.4ಕ್ಕೆ ಇಳಿದಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮದಿಂದ ಗಲ್ಫ್ ದೇಶಗಳಿಗೆ ಸಾಗಣೆ ತಾತ್ಕಾಲಿಕವಾಗಿ ನಿಂತಿದೆ. ಸಾಮಾನ್ಯವಾಗಿ ಭಾರತದಿಂದ ದಿನಕ್ಕೆ 80 ಲಕ್ಷದಿಂದ 1 ಕೋಟಿ ಮೊಟ್ಟೆಗಳು ಗಲ್ಫ್ ರಾಷ್ಟ್ರಗಳಿಗೆ ರಫ್ತು ಆಗುತ್ತವೆ. ಈ ರಫ್ತು ಸಂಪೂರ್ಣವಾಗಿ ನಿಂತಿರುವುದರಿಂದ ಆ ಮೊಟ್ಟೆಗಳು ದೇಶೀಯ ಮಾರುಕಟ್ಟೆಗೆ ಬರುತ್ತಿದ್ದು, ಇದರಿಂದ ಸರಬರಾಜು ಹೆಚ್ಚಾಗಿ ದರ ಕುಸಿತವಾಗುತ್ತಿದೆ ಎಂದು ಉದ್ಯಮ ವಲಯ ಹೇಳಿದೆ.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಇದರ ಜೊತೆಗೆ ರಮ್ಜಾನ್ ಉಪವಾಸ ಕಾಲ, ಶಾಲಾ ಪರೀಕ್ಷೆಗಳು ಹಾಗೂ ಬೇಸಿಗೆ ಕಾಲದಲ್ಲಿ ಬಳಕೆ ಕಡಿಮೆಯಾಗಿರುವುದೂ ದರ ಇಳಿಕೆಗೆ ಕಾರಣವಾಗಿದೆ. ಇದರಿಂದ ಮೊಟ್ಟೆ ಉತ್ಪಾದಕರಿಗೆ ನಷ್ಟವಾಗುತ್ತಿದ್ದರೂ, ಸಾಮಾನ್ಯ ಗ್ರಾಹಕರಿಗೆ ಕಡಿಮೆ ದರದಲ್ಲಿ ಮೊಟ್ಟೆ ಲಭ್ಯವಾಗುತ್ತಿರುವುದು ಸ್ವಲ್ಪ ನೆಮ್ಮದಿ ನೀಡಿದೆ.

ಕರ್ನಾಟಕದಲ್ಲಿ ದಿನಕ್ಕೆ ಸುಮಾರು 2.2 ಕೋಟಿ ಮೊಟ್ಟೆಗಳ ಉತ್ಪಾದನೆ ನಡೆಯುತ್ತದೆ. ರಫ್ತು ಮಾರುಕಟ್ಟೆ ಸ್ಥಗಿತಗೊಂಡ ಕಾರಣ ಈ ಉತ್ಪಾದನೆಯ ದೊಡ್ಡ ಭಾಗ ಈಗ ದೇಶೀಯ ಮಾರುಕಟ್ಟೆಯಲ್ಲೇ ಮಾರಾಟವಾಗುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮೊಟ್ಟೆ ದರ ಇನ್ನಷ್ಟು ದಿನಗಳು ಕಡಿಮೆ ಮಟ್ಟದಲ್ಲೇ ಇರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಪೋಲ್ಟ್ರಿ ರೈತರು ಈ ಬೆಳವಣಿಗೆಯಿಂದ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದಿಂದ ಬೆಂಬಲ ಮತ್ತು ಪರ್ಯಾಯ ಮಾರುಕಟ್ಟೆಗಳನ್ನು ಹುಡುಕುವ ಅಗತ್ಯವಿದೆ ಎಂದು ರೈತ ಸಂಘಟನೆಗಳು ಆಗ್ರಹಿಸಿವೆ.

😀
0
😍
0
😢
0
😡
0
👍
1
👎
0

Web Add
Prajapara News Kannada