ಮಂಗಳೂರು, ಮೇ 17:ಅಶೋಕ ಆರಾಮ ಬುದ್ಧ ವಿಹಾರ, ಹನೂರು ಇದರ ಪೂಜ್ಯ ಧಮ್ಮತಿಸ್ಸ ಭಂತೇಜಿ ಹಾಗೂ ಹನೂರಿನ ಏಳು ಮಂದಿ ಉಪಾಸಕರು ಮಂಗಳೂರಿಗೆ ಆಗಮಿಸಿದ್ದಾರೆ. ಈ ಪ್ರಯುಕ್ತ ನಾಳೆ ಮೇ 18, 2026ರಂದು ಸೋಮವಾರ ಸಂಜೆ 6 ಗಂಟೆಗೆ ನಗರದ ಪೇಜಾವರದಲ್ಲಿರುವ ಅಂಬೇಡ್ಕರ್ ಭವನದಲ್ಲಿ “ಧಮ್ಮದೀಪ” ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವು ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ನಡೆಯಲಿದ್ದು, ಬೌದ್ಧ ಧಮ್ಮದ ಸಂದೇಶ, ಶಾಂತಿ ಮತ್ತು ಸಮಾನತೆಯ ಮೌಲ್ಯಗಳ ಕುರಿತು ಉಪನ್ಯಾಸ ಹಾಗೂ ಧಮ್ಮ ಚಿಂತನೆಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.
ಧಮ್ಮಾಭಿಮಾನಿಗಳು, ಬೌದ್ಧ ಉಪಾಸಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಲಾಗಿದೆ.