Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪೋಲಿಯೊ ಹಾಕಿಸಿ… ಅಂಗವೈಕಲ್ಯತೆ ಓಡಿಸಿ: ರಾಷ್ಟ್ರೀಯ ಲಸಿಕಾ ದಿನಕ್ಕೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ಕರೆ

ಪೋಲಿಯೊ ಹಾಕಿಸಿ… ಅಂಗವೈಕಲ್ಯತೆ ಓಡಿಸಿ: ರಾಷ್ಟ್ರೀಯ ಲಸಿಕಾ ದಿನಕ್ಕೆ ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು: ಗೃಹಕಚೇರಿ ಕೃಷ್ಣಾದಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಲಸಿಕಾ ದಿನವನ್ನು ಉದ್ಘಾಟಿಸಿದರು. ಈ ವೇಳೆ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ‘ಪೋಲಿಯೊ ಮುಕ್ತ ಭಾರತ’ ಅಭಿಯಾನಕ್ಕೆ ಬೆಂಬಲ ನೀಡುವಂತೆ ಅವರು ಪೋಷಕರಿಗೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಮತ್ತೊಂದೆಡೆ ಸದಾಶಿವನಗರದ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರೀಯ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ, ಡಿಸೆಂಬರ್ 24ರೊಳಗೆ ಮಕ್ಕಳಿಗೆ ಲಸಿಕೆ ಹಾಕಿಸಿ ಅಂಗವೈಕಲ್ಯತೆ ನಿರ್ಮೂಲನೆಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದರು.

😀
0
😍
0
😢
0
😡
0
👍
2
👎
0

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading