Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಕೊಡಿಯಾಲ್‌ಬೈಲ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ: ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಕ್ರಮಕ್ಕೆ ಐವನ್‌ ಡಿʼಸೋಜಾ ಸೂಚನೆ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್‌ಬೈಲ್‌ ವಾರ್ಡಿನ ಕೊಡಿಯಾಲ್‌ಗುತ್ತು ವೆಟ್‌ವೆಲ್‌ನಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡುಗಳಿಗೆ ಬಿಡಲಾಗುತ್ತಿರುವುದರಿಂದ ಸ್ಥಳೀಯ ಬಾವಿಗಳ ನೀರು ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ. ಈ ನೀರನ್ನು ಉಪಯೋಗಿಸುವುದರಿಂದ ನಿವಾಸಿಗಳಿಗೆ ರೋಗ-ರುಜಿನಗಳ ಭೀತಿ ಎದುರಾಗಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸ್ಥಳೀಯ ಮಾಜಿ ಕಾರ್ಪೊರೇಟರ್‌ ಪ್ರಕಾಶ್‌ ಬಿ. ಸಾಲ್ಯಾನ್‌ ಅವರ ವಿನಂತಿಯ ಮೇರೆಗೆ ವಿಧಾನ ಪರಿಷತ್‌ ಶಾಸಕ ಐವನ್‌ ಡಿʼಸೋಜಾ ಅವರು ಸದ್ರಿ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಣೆ ನಡೆಸಿದರು. ನಾಗರಿಕರಿಂದ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಕೂಡಲೇ ಇದನ್ನು ಸರಿಪಡಿಸುವಂತೆ ನಗರ ಪಾಲಿಕೆ ಆಯುಕ್ತರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಈ ಪ್ರದೇಶದ ಕೊಳಚೆ ನೀರು ಕುದ್ರೋಳಿ ವೆಟ್‌ವೆಲ್‌ಗೆ ಹರಿಯಬೇಕಾಗಿದ್ದರೂ, ಅಲ್ಲಿನ ಪೈಪ್‌ಗಳು ಹಳೆಯದಾಗಿರುವುದರಿಂದ ಕೊಳಚೆ ನೀರನ್ನು ಸಾರ್ವಜನಿಕ ತೋಡಿಗೆ ಬಿಡಲಾಗುತ್ತಿದೆ. ಇದರಿಂದ ದುರ್ವಾಸನೆ, ಸೊಳ್ಳೆಗಳ ಕಾಟ ಹೆಚ್ಚಾಗಿ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದರು.

ಈ ಕುರಿತು ಅಧಿಕಾರಿಗಳು ಮಾತನಾಡಿ, ಕೂಡಲೇ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೊಳಚೆ ನೀರನ್ನು ಪೈಪ್‌ಗಳ ಮೂಲಕ ಹರಿಸುವ ವ್ಯವಸ್ಥೆಗಾಗಿ ಮೂರು ಪೈಪ್‌ಗಳಿಗೆ ಸುಮಾರು 5 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಇಂಜಿನಿಯರ್‌ಗಳು ತಿಳಿಸಿದ್ದಾರೆ ಎಂದು ಶಾಸಕ ಐವನ್‌ ಡಿʼಸೋಜಾ ಹೇಳಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಈ ಸಂದರ್ಭದಲ್ಲಿ ಪ್ರಕಾಶ್‌ ಬಿ. ಸಾಲ್ಯಾನ್‌, ಅನಂತ್‌ ಕಾಮತ್‌, ಸಂಜಯ್‌ ಶೇಟ್‌, ರಘುರಾಜ್‌ ಕದ್ರಿ, ದಿನೇಶ್‌ ಬಲಿಪತೋಟ, ದೇವಿ ಪ್ರಸಾದ್‌ ಕದ್ರಿ, ಹರೀಶ್‌ ಕೊಡಿಯಾಲ್‌ಬೈಲ್‌, ಕೇಶವ, ಉಮಾನಾಥ್‌ ಗುರಿಕಾರ, ರವಿ ಬಲಿಪತೋಟ, ಶೈಲೇಶ್‌ ಬಲಿಪತೋಟ, ಸುರೇಶ್‌, ಧನಂಜಯ್‌, ಗಂಗಾಧರ್‌ ಮಾಸ್ಟರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading