Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ಹಿಂದುತ್ವದ ಘೋಷಣೆಯಿಂದ ಭೋರ್ಗರೆದ ಅರ್ಕುಳ ಹಿಂದೂ ಸಂಗಮ ಸಮಾವೇಶ

ಹಿಂದುತ್ವದ ಘೋಷಣೆಯಿಂದ ಭೋರ್ಗರೆದ ಅರ್ಕುಳ ಹಿಂದೂ ಸಂಗಮ ಸಮಾವೇಶ

ಸಹಸ್ರಾರು ಹಿಂದೂಗಳ ಐಕ್ಯತೆಯೊಂದಿಗೆ ಐತಿಹಾಸಿಕವಾಗಿ ಸಂಪನ್ನಗೊಂಡ ಅರ್ಕುಳ ಹಿಂದೂ ಸಂಗಮ

ಅರ್ಕುಳ: ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳನ್ನೊಳಗೊಂಡ ಅರ್ಕುಳ ವಸತಿಯ ಆಶ್ರಯದಲ್ಲಿ ದಿನಾಂಕ 18 ಜನವರಿ 2026ರ ಆದಿತ್ಯವಾರ ಅರ್ಕುಳದಲ್ಲಿ ಹಿಂದೂ ಸಂಗಮ ಸಮಾವೇಶವು ಅತ್ಯಂತ ಶಿಸ್ತಿನೊಂದಿಗೆ ಹಾಗೂ ಅದ್ಧೂರಿಯಾಗಿ ನೆರವೇರಿತು.

ಸಂಜೆ 3:30ರಿಂದ ಅರ್ಕುಳ ನಾರಾಯಣಗುರು ಮಂದಿರದಿಂದ ಶ್ರೀ ಉಳ್ಳಾಕ್ಲು ಮಗ್ರಂತಾಯಿ ದೈವಸ್ಥಾನದ ಚೆಂಡಿನ ಗದ್ದೆಯವರೆಗೆ ಸಹಸ್ರಾರು ಹಿಂದೂಗಳ ಭಾಗವಹಿಸುವಿಕೆಯಿಂದ ವೈಭವಯುತ ಬೃಹತ್ ಶೋಭಾಯಾತ್ರೆ ನಡೆಯಿತು. ಕುಣಿತ ಭಜನೆ, ಚೆಂಡೆ ವಾದನ, ಘೋಷವಾಕ್ಯಗಳು ಹಾಗೂ ಧಾರ್ಮಿಕ–ಸಾಂಸ್ಕೃತಿಕ ವೈಭವದಿಂದ ಶೋಭಾಯಾತ್ರೆ ಜನಮನ ಸೆಳೆದು ಅರ್ಕುಳವನ್ನು ಹಿಂದುತ್ವದ ಘೋಷಣೆಯಿಂದ ಭೋರ್ಗರೆಯುವಂತೆ ಮಾಡಿತು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ಶೋಭಾಯಾತ್ರೆಯ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅರ್ಕುಳಬೀಡು ಧರ್ಮಾಧಿಕಾರಿ ಶ್ರೀ ವಜ್ರನಾಭ ಶೆಟ್ಟಿ ಅವರು ಆಶೀರ್ವಚನ ನೀಡಿದರು. ದಕ್ಷಿಣ ಪ್ರಾಂತ ಸಹಕಾರ್ಯವಾಹಕ ಪಿ.ಎಸ್. ಪ್ರಕಾಶ್ ಅವರು ಹಿಂದೂ ಸಮಾಜದ ಏಕತೆ, ಸಂಸ್ಕೃತಿ ಮತ್ತು ಸಂಘಟಿತ ಶಕ್ತಿಯ ಮಹತ್ವವನ್ನು ವಿವರಿಸಿ, ಸಮಾಜ ಸಂಘಟನೆಯ ಅಗತ್ಯತೆಯ ಬಗ್ಗೆ ಪ್ರಾಸಂಗಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಿರ್ವಹಣೆಯ ಅಧ್ಯಕ್ಷ ವಿವೇಕ್ ಕೋಟ್ಯಾನ್ ಕೊಡಕ್ಕಲ್, ಸದಾನಂದ ಆಳ್ವ, ಶ್ರೀಮತಿ ಉಮಾ ಸೋಮಯಾಜಿ, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು ಸಮಾವೇಶಕ್ಕೆ ಶೋಭೆ ತಂದರು.

ಸಭಾ ವೇದಿಕೆಯಲ್ಲಿ ಆರ್‌ಎಸ್‌ಎಸ್ ಮೂಲಕ ತಮ್ಮ ಜೀವನವನ್ನೇ ಸಮಾಜಸೇವೆಗೆ ಸಮರ್ಪಿಸಿದ ಹಿರಿಯರಾದ ಮಾಧವ ಟೈಲರ್ ತುಪ್ಪೆಕಲ್ಲು, ಸೇಸಪ್ಪ ಕರ್ಕೇರಾ ಮಂಟಮೆ ಹಾಗೂ ಚಂದಪ್ಪ ಕೊಟ್ಟಾರಿ ವಳಚ್ಚಿಲ್ ಇವರನ್ನು ಗಣ್ಯರ ಸಮ್ಮುಖದಲ್ಲಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಸಾಯಿಶಕ್ತಿ ಕಲಾಬಳಗ, ಉರ್ವಚಿಲಿಂಬಿ – ಮಂಗಳೂರು ಇವರಿಂದ “ಜೋಡುಜೀಟಿಗೆ” ಎಂಬ ಅದ್ದೂರಿ ಪೌರಾಣಿಕ ನಾಟಕ ಪ್ರದರ್ಶನಗೊಂಡಿತು. ಪೌರಾಣಿಕ ಕಥನ, ಕಲಾವಿದರ ಅಭಿನಯ ಹಾಗೂ ವೇದಿಕೆಯ ಆಕರ್ಷಕ ವಿನ್ಯಾಸ ಪ್ರೇಕ್ಷಕರ ಮನಗೆದ್ದು ಕಾರ್ಯಕ್ರಮಕ್ಕೆ ವಿಶಿಷ್ಟ ಆಯಾಮ ನೀಡಿತು.

ಕಾರ್ಯಕ್ರಮವನ್ನು ಅಶೋಕ್ ಕೊಟ್ಟಾರಿ ಸ್ವಾಗತಿಸಿದರು. ದಿನಕರ ಕರ್ಕೇರಾ ಮಂಟಮೆ ವಂದನಾರ್ಪಣೆ ನೆರವೇರಿಸಿದರು. ಸಂಪೂರ್ಣ ಕಾರ್ಯಕ್ರಮವನ್ನು ನಾಗರಾಜ್ ಶೆಟ್ಟಿ ತುಪ್ಪೆಕಲ್ಲು ಅವರು ಸಮರ್ಥವಾಗಿ ನಿರೂಪಿಸಿದರು.

ಒಟ್ಟಾರೆ, ಅರ್ಕುಳ ಹಿಂದೂ ಸಂಗಮ ಸಮಾವೇಶವು ಹಿಂದೂ ಸಮಾಜದ ಸಂಘಟಿತ ಶಕ್ತಿ, ಸಾಂಸ್ಕೃತಿಕ ಪರಂಪರೆ ಮತ್ತು ಧಾರ್ಮಿಕ ಏಕತೆಯನ್ನು ಸಾರುವ ಮಹತ್ವದ ವೇದಿಕೆಯಾಗಿದ್ದು, ಭಾಗವಹಿಸಿದ ಸಹಸ್ರಾರು ಜನರಲ್ಲಿ ಹೊಸ ಉತ್ಸಾಹ ಹಾಗೂ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಯಶಸ್ವಿಯಾಯಿತು.

😀
0
😍
0
😢
0
😡
0
👍
1
👎
0

Web Add
Prajapara News Kannada