Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಬೀದರ್‌: ಡಾ. ಭೀಮಣ್ಣ ಖಂಡ್ರೆ ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಡಾ. ಭೀಮಣ್ಣ ಖಂಡ್ರೆ  ಅಂತಿಮ ದರ್ಶನ –ಮುಖ್ಯಮಂತ್ರಿಗಳಿಂದ ಸರ್ಕಾರಿ ಗೌರವ

ಬೀದರ್‌: ಹಿರಿಯ ಕಾಂಗ್ರೆಸ್ ಧುರೀಣರಾದ ಡಾ. ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಇಂದು ಭಾಲ್ಕಿಯಲ್ಲಿ ನಡೆಯಿತು.

ಬೀದರ್ ಜಿಲ್ಲೆಯ ಮಾಜಿ ಸಚಿವರೂ, ಶತಾಯುಷಿಯಾಗಿದ್ದ ಡಾ. ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಡೆದು ಸರ್ಕಾರಿ ಗೌರವ ಸಲ್ಲಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ: JCI ಬಂಟ್ವಾಳದಿಂದ ಶ್ರೀನಿವಾಸ್ ಅರ್ಬಿಗುಡ್ಡೆ ಅವರಿಗೆ ‘ಸಾಧನಶ್ರೀ’ ಪುರಸ್ಕಾರ

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ಕರ್ನಾಟಕ ಏಕೀಕರಣಕ್ಕಾಗಿ ಮಿಡಿದ ಹೃದಯ, ಗಡಿನಾಡಿನಲ್ಲಿ ಕನ್ನಡದ ಕಹಳೆ ಮೊಳಗಿಸಿದ ಧ್ವನಿ ಇಂದು ಮೌನವಾಗಿದೆ. ಭಾಷೆಗಳ ಸಂಘರ್ಷದ ನಡುವೆಯೂ ಅಪ್ಪಟ ಕನ್ನಡಿಗರಾಗಿ ಕನ್ನಡದ ಅಸ್ಮಿತೆಯನ್ನು ಎತ್ತಿ ಹಿಡಿದ ಡಾ. ಭೀಮಣ್ಣ ಖಂಡ್ರೆ ಅವರ ಬದುಕು ನಮಗೆಲ್ಲರಿಗೂ ದಾರಿದೀಪ. ಕರುನಾಡು ಒಬ್ಬ ಶ್ರೇಷ್ಠ ಮಾರ್ಗದರ್ಶಕನನ್ನು ಕಳೆದುಕೊಂಡಿದೆ” ಎಂದು ಸಂತಾಪ ವ್ಯಕ್ತಪಡಿಸಿದರು.
ಮುಂದುವರಿದು ಅವರು, ದಿವಂಗತ ನಾಯಕನ ಅಗಲಿಕೆಯಿಂದ ದುಃಖಿತರಾದ ಕುಟುಂಬದ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ ಮುಖಂಡರು ಡಾ. ಭೀಮಣ್ಣ ಖಂಡ್ರೆ ಅವರ ಜನಸೇವೆ, ನಾಡು–ನುಡಿಯ ಮೇಲಿನ ಬದ್ಧತೆ ಹಾಗೂ ಮೌಲ್ಯಾಧಾರಿತ ರಾಜಕಾರಣವನ್ನು ಸ್ಮರಿಸಿ ಗೌರವಿಸಿದರು. ಅಪಾರ ಸಂಖ್ಯೆಯ ಸಾರ್ವಜನಿಕರು ಹಾಗೂ ಅಭಿಮಾನಿಗಳು ದಿವಂಗತ ನಾಯಕರಿಗೆ ಅಂತಿಮ ನಮನ ಸಲ್ಲಿಸಿದರು.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

ಪ್ರಜಾಪರ ನ್ಯೂಸ್ – ಸರ್ವ ಜನರ ಏಕ ಧ್ವನಿ
ವರದಿ: ಅರವಿಂದ ಮಲ್ಲೀಗೆ

😀
0
😍
0
😢
0
😡
0
👍
0
👎
0

##BhimannaKhandre #BidarNews #KarnatakaPolitics #CongressLeaders #LastRespect ❖
Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading