ಬೀದರ್: ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ಚರಂಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೀದರ್ ತಾಲೂಕಿನ ಮರ್ಜಾಪುರ (ಎಂ) ಗ್ರಾಮದಲ್ಲಿ ನಡೆದಿದ್ದು, ಮೃತ ಬಾಲಕನನ್ನು ಅವಿನಾಶ್ (5) ಎಂದು ಗುರುತಿಸಲಾಗಿದೆ.
ಹಬ್ಬದ ನಿಮಿತ್ತ ಅಜ್ಜಿ–ತಾತನ ಮನೆಗೆ ಬಂದಿದ್ದ ಬಾಲಕ, ಮನೆ ಮುಂದೆ ಆಟವಾಡುತ್ತಿದ್ದ ವೇಳೆ ಆಯತಪ್ಪಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಕೆಲ ಸಮಯದ ಬಳಿಕ ಬಾಲಕ ಮನೆಗೆ ಮರಳದ ಕಾರಣ ಆತಂಕಗೊಂಡ ಪೋಷಕರು ಹಾಗೂ ಬಂಧುವರು ಎಲ್ಲೆಡೆ ಹುಡುಕಾಟ ಆರಂಭಿಸಿದರು. ಬಳಿಕ ಚರಂಡಿ ನೀರಿನೊಳಗೆ ಬಾಲಕನ ಮೃತದೇಹ ಪತ್ತೆಯಾದುದು ದುಃಖಕರ ಸಂಗತಿಯಾಗಿದೆ.
ಈ ಘಟನೆ ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ. ಗ್ರಾಮದಲ್ಲಿ ಈ ದುರ್ಘಟನೆ ಆಘಾತ ಮತ್ತು ಶೋಕ ವಾತಾವರಣವನ್ನು ಮೂಡಿಸಿದೆ.
ವರದಿ: ಅರವಿಂದ ಮಲ್ಲೀಗೆ, ಬೀದರ್ ಜಿಲ್ಲಾ
😀
.
0
😍0
😢0
😡0
👍1
👎0