Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

ವಿಡಿಯೋ ವೈರಲ್; ಬಾಲಕನ ಮೇಲೆ ಪೋಲೀಸ್ ದರ್ಪ

ವಿಡಿಯೋ ವೈರಲ್; ಬಾಲಕನ ಮೇಲೆ ಪೋಲೀಸ್ ದರ್ಪ

ಈ ದೇಶದಲ್ಲಿ ರಾತ್ರಿ ಹೊತ್ತು ಬಸ್ಟೆಂಡ್ ನಲ್ಲಿ ಇನ್ವೆಸ್ಟಿಗೇಷನ್ ಮಾಡುವ ಕಾನೂನು ಇದೆಯಾ ? ಸ್ಥಳೀಯರ ಪ್ರಶ್ನೆ.

ಗಂಗಾವತಿ: ಗಂಗಾವತಿ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುವ ಸಮಗಾರ ಸಮುದಾಯಕ್ಕೆ ಸೇರಿದ ಮೈನರ್ ಬಾಲಕನ ಮೇಲೆ ಕೆಲ ಪೊಲೀಸ್ ಅಧಿಕಾರಿಗಳು ನಡೆಸಿದ್ದಾರೆ ಎನ್ನಲಾದ ಅಟ್ರಾಸಿಟಿ ದೌರ್ಜನ್ಯಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ವಿಡಿಯೋದಲ್ಲಿ ಮೈನರ್ ಬಾಲಕ ನನ್ನ ಮೇಲೆ ಪೊಲೀಸ್ ಅಧಿಕಾರಿಗಳು ಅಮಾನುಷವಾಗಿ ವರ್ತಿಸುತ್ತಿದ್ದಾರೆ ಎಂದು ಬಾಲಕ ಹೇಳಿದ್ದಾನೆ, ಸ್ಥಳೀಯರು ಇದನ್ಬು ನೋಡಿದ್ದಾರೆ ಎಂದಿದ್ದಾರೆ. ಈ ಘಟನೆ ಮಾನವೀಯತೆಗೂ ಹಾಗೂ ಕಾನೂನು ಸುವ್ಯವಸ್ಥೆಯ ಮೌಲ್ಯಗಳಿಗೂ ವಿರುದ್ಧವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತರು ಹಾಗೂ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಶದಲ್ಲಿ ರಾತ್ರಿ ಹೊತ್ತು ಬಸ್ಟೆಂಡ್ ನಲ್ಲಿ ಇನ್ವೆಸ್ಟಿಗೇಷನ್ ಮಾಡುವ ಕಾನೂನು ಇದೆಯಾ.. ಎಂದು ಸ್ಥಳೀಯರು ಪ್ರಶ್ನಿಸುವ ಜೊತೆಗೆ ಪೋಲೀಸರ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದಲ್ಲದೆ, ಗಂಗಾವತಿ ಬಸ್ ನಿಲ್ದಾಣದ ಡಿಪೋ ಕಂಟ್ರೋಲರ್ ಅವರ ನಿರ್ಲಕ್ಷ್ಯಪೂರ್ಣ ಕರ್ತವ್ಯವೂ ಈ ಘಟನೆಗೆ ಕಾರಣವಾಗಿದೆ ಎಂದು ಆರೋಪಿಸಲಾಗಿದ್ದು, ಅವರನ್ನೂ ಸಹ ಈ ಪ್ರಕರಣದಲ್ಲಿ ಅಮಾನತುಗೊಳಿಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.
ಘಟನೆಯ ಕುರಿತು ಮಾತನಾಡಿದ ಕೆಲವರು, “ಪೊಲೀಸ್ ಇಲಾಖೆ ಎಂದರೆ ನಮಗೆ ಅತೀವ ಪ್ರೀತಿ ಮತ್ತು ಗೌರವ. ಆದರೆ ಇಂತಹ ಕೆಲವರ ಕಾನೂನು ಉಲ್ಲಂಘನೆ ಹಾಗೂ ದೌರ್ಜನ್ಯ ಕೃತ್ಯಗಳಿಂದ ಸಂಪೂರ್ಣ ಇಲಾಖೆಯ ಮೇಲೆಯೇ ಜನರಿಗೆ ಅಪನಂಬಿಕೆ ಮೂಡುತ್ತದೆ. ಇದು ಅತ್ಯಂತ ದುಃಖಕರ,” ಎಂದು ಹೇಳಿದರು.
ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ, ಮೈನರ್ ಬಾಲಕನಿಗೆ ನ್ಯಾಯ ದೊರಕಿಸುವಂತೆ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಮೇಲಧಿಕಾರಿಗಳು ಸ್ಪಷ್ಟ ಸಂದೇಶ ನೀಡಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ. ಪ್ರಕರಣದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೂಡಾ ಆಗ್ರಹಿಸಲಾಗಿದೆ.
😀
0
😍
0
😢
0
😡
0
👍
1
👎
0

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

Web Add
Prajapara News Kannada