₹4.48 ಲಕ್ಷ ಕೋಟಿ ಗಾತ್ರದ ಬಜೆಟ್; ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ಯೋಜನೆಗಳಿಗೆ ಸರ್ಕಾರದ ಒತ್ತು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ 2026-27ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮಂಡಿಸಿದ್ದು, ಸುಮಾರು ₹4.48 ಲಕ್ಷ ಕೋಟಿ ಗಾತ್ರದ ಬಜೆಟ್ ಆಗಿದೆ. ಇದು ಸಿದ್ದರಾಮಯ್ಯ ಅವರ ದಾಖಲೆ 17ನೇ ಬಜೆಟ್ ಆಗಿದ್ದು, ಸಾಮಾಜಿಕ ನ್ಯಾಯ, ಶಿಕ್ಷಣ, ಮೂಲಸೌಕರ್ಯ ಹಾಗೂ ಜನಪರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಈ ಬಜೆಟ್ನಲ್ಲಿ ವಿಶೇಷವಾಗಿ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಹಿಂದುಳಿದ ವರ್ಗಗಳು (OBC) ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನ ಘೋಷಿಸಲಾಗಿದೆ.
ದಲಿತ ಸಮುದಾಯಕ್ಕೆ ₹30 ಸಾವಿರ ಕೋಟಿ
ಪರಿಶಿಷ್ಟ ಜಾತಿ (SC) ಸಮುದಾಯದ ಅಭಿವೃದ್ಧಿಗಾಗಿ ಸುಮಾರು ₹30,000 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ಅನುದಾನವನ್ನು ಶಿಕ್ಷಣ, ವಸತಿ, ಸ್ವಯಂ ಉದ್ಯೋಗ ಹಾಗೂ ವಿವಿಧ ಕಲ್ಯಾಣ ಯೋಜನೆಗಳಿಗೆ ಬಳಸಲಾಗುತ್ತದೆ.
ಮುಖ್ಯ ಯೋಜನೆಗಳು: ವಿದ್ಯಾರ್ಥಿವೇತನ ಯೋಜನೆ,ವಸತಿ ಶಾಲೆಗಳ ಅಭಿವೃದ್ಧಿ, ಸ್ವಯಂ ಉದ್ಯೋಗ ಸಾಲ ಯೋಜನೆ
ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳು, ಆದಿವಾಸಿ ಸಮುದಾಯಕ್ಕೆ ₹14,600 ಕೋಟಿ, ಪರಿಶಿಷ್ಟ ಪಂಗಡ (ST) ಸಮುದಾಯದ ಅಭಿವೃದ್ಧಿಗಾಗಿ ಸುಮಾರು ₹14,600 ಕೋಟಿ ಅನುದಾನ ನೀಡಲಾಗಿದೆ.
ಪ್ರಮುಖ ಯೋಜನೆಗಳು:ಆದಿವಾಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ, ಅರಣ್ಯ ಪ್ರದೇಶ ಅಭಿವೃದ್ಧಿ ಯೋಜನೆ, ಆರೋಗ್ಯ ಹಾಗೂ ವಸತಿ ಯೋಜನೆಗಳು,
SC-ST ಒಟ್ಟಿಗೆ ₹44,632 ಕೋಟಿ
ರಾಜ್ಯ ಸರ್ಕಾರ SC ಮತ್ತು ST ಸಮುದಾಯಗಳ ಅಭಿವೃದ್ಧಿಗಾಗಿ ಒಟ್ಟಾರೆ ₹44,632 ಕೋಟಿ ಅನುದಾನ ಘೋಷಿಸಿದೆ. ಇದು ರಾಜ್ಯದ ಸಾಮಾಜಿಕ ನ್ಯಾಯ ಯೋಜನೆಗಳಲ್ಲಿ ಪ್ರಮುಖ ಅನುದಾನವೆಂದು ಪರಿಗಣಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ₹4,500 ಕೋಟಿ
ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸರ್ಕಾರ ಸುಮಾರು ₹4,500 ಕೋಟಿ ಅನುದಾನ ಮೀಸಲಿಟ್ಟಿದೆ.
ಯೋಜನೆಗಳು:
ವಿದ್ಯಾರ್ಥಿವೇತನ
ಸ್ವಯಂ ಉದ್ಯೋಗ ಯೋಜನೆ
ಕೌಶಲ್ಯಾಭಿವೃದ್ಧಿ ತರಬೇತಿ
ಸಣ್ಣ ಉದ್ಯಮಗಳಿಗೆ ಆರ್ಥಿಕ ನೆರವು
ಅಲ್ಪಸಂಖ್ಯಾತ ಸಮುದಾಯಕ್ಕೆ ₹3,200 ಕೋಟಿ
ಅಲ್ಪಸಂಖ್ಯಾತ ಸಮುದಾಯದ ಶಿಕ್ಷಣ ಮತ್ತು ಉದ್ಯೋಗಾವಕಾಶ ಹೆಚ್ಚಿಸಲು ಸುಮಾರು ₹3,200 ಕೋಟಿ ಅನುದಾನ ಘೋಷಿಸಲಾಗಿದೆ.
ಯೋಜನೆಗಳು:
ವಿದ್ಯಾರ್ಥಿವೇತನ
ವಸತಿ ಮತ್ತು ಶಿಕ್ಷಣ ಸಹಾಯ
ಸ್ವಯಂ ಉದ್ಯೋಗ ಸಾಲ ಯೋಜನೆ
ಕೌಶಲ್ಯಾಭಿವೃದ್ಧಿ ತರಬೇತಿ
ಮಹಿಳೆಯರಿಗೆ ಶಕ್ತಿ ಯೋಜನೆ ಮುಂದುವರಿಕೆ
ರಾಜ್ಯ ಸರ್ಕಾರ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಗೆ ₹5,300 ಕೋಟಿ ಅನುದಾನ ನೀಡಿದೆ. ಈ ಯೋಜನೆಯ ಮೂಲಕ ಮಹಿಳೆಯರು ರಾಜ್ಯ ಸಾರಿಗೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಮುಂದುವರಿಯಲಿದೆ.
ಶಿಕ್ಷಣ ಕ್ಷೇತ್ರಕ್ಕೆ ಒತ್ತು
ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ.
ರಾಜ್ಯದಲ್ಲಿ 15,000 ಶಿಕ್ಷಕರ ನೇಮಕಾತಿ
800 ಸರ್ಕಾರಿ ಶಾಲೆಗಳ ಅಭಿವೃದ್ಧಿ
ಐಟಿ ಹಾಗೂ ಉದ್ಯೋಗ ಸೃಷ್ಟಿಗೆ ಹೊಸ ಯೋಜನೆ
ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಸರ್ಕಾರ ಎರಡನೇ ಐಟಿ ಸಿಟಿ ಮತ್ತು ವಿಜ್ಞಾನ ನಗರ ಸ್ಥಾಪನೆ ಘೋಷಿಸಿದೆ. ಈ ಯೋಜನೆಯ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆಯಿದೆ.
ಒಟ್ಟಾರೆ ಈ ಬಜೆಟ್ನಲ್ಲಿ ಸರ್ಕಾರ ಸಾಮಾಜಿಕ ನ್ಯಾಯ, ಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ಗಮನಾರ್ಹವಾಗಿದೆ. ವಿಶೇಷವಾಗಿ ದಲಿತ, ಆದಿವಾಸಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ದೊಡ್ಡ ಪ್ರಮಾಣದ ಅನುದಾನ ಘೋಷಿಸಿರುವುದು ಈ ಬಜೆಟ್ನ ಪ್ರಮುಖ ಅಂಶವಾಗಿದೆ.