Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ

ಮಾಣಿ: ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆ ಸೇಸಮ್ಮ ಅವರಿಗೆ ಜಾತಿ ನಿಂದನೆ ನಡೆಸಿ, ಕೆಲಸ ನಿರ್ವಹಿಸಲು ಅವಕಾಶ ನೀಡದೇ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂಬ ಆರೋಪ ಕುರಿತು ಪ್ರಜಾಪರ ನ್ಯೂಸ್ ನಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಪ್ರಕರಣಕ್ಕೆ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಕಳೆದ ಸುಮಾರು ಒಂದು ತಿಂಗಳಿನಿಂದ ಕಂಪ್ಯೂಟರ್ ಪಾಸ್‌ವರ್ಡ್ ನೀಡದೇ ಹಾಗೂ ಸ್ಟಾಕ್ ವ್ಯತ್ಯಾಸದ ಗೊಂದಲ ಸೃಷ್ಟಿಸಿ ತಪ್ಪಿಗೆ ಸಿಲುಕುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿತ್ತು. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ದಿನೇಶ್ ಮುಳೂರು ಅವರ ನೇತೃತ್ವದಲ್ಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿಯ ಸ್ಥಾಪಕಾಧ್ಯಕ್ಷ ಬಿ.ಕೆ. ಸೇಸಪ್ಪ ಬೆದ್ರಕಾಡು ಅವರ ಸಹಯೋಗದೊಂದಿಗೆ ಸಂಘದ ಅಧ್ಯಕ್ಷ ಪುಷ್ಪರಾಜ್ ಚೌಟ ಹಾಗೂ ಕಾರ್ಯನಿರ್ವಹಣಾಧಿಕಾರಿ ಯಶೋಧರ ಅವರೊಂದಿಗೆ ಮಾತುಕತೆ ನಡೆಸಲಾಯಿತು.

ಇದನ್ನೂ ಓದಿ: ಕರ್ನಾಟಕದಲ್ಲಿ ಹಸಿರು ವಿದ್ಯುತ್ ಇಂಧನ ಮತ್ತು ಭೌಗೋಳಿಕ ರಾಜಕೀಯದ ಅಡ್ಡಿ

ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ದಾಸ್ತಾನು ಲೆಕ್ಕ ಪರಿಶೀಲನೆ ನಡೆಸಿ ಸೇಸಮ್ಮ ಅವರಿಗೆ ಕಂಪ್ಯೂಟರ್ ಪಾಸ್‌ವರ್ಡ್ ಹಸ್ತಾಂತರಿಸಲಾಯಿತು. ಈ ಮೂಲಕ ಹಲವು ದಿನಗಳಿಂದ ಮುಂದುವರಿದಿದ್ದ ಗೊಂದಲ ಹಾಗೂ ಕೆಲಸ ನಿರ್ವಹಣೆಗೆ ಇದ್ದ ಅಡ್ಡಿ ಸಮಸ್ಯೆಗಳು ಬಗೆಹರಿದಿವೆ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಫಾಯಿ ಕರ್ಮಚಾರಿ ವಿಭಾಗದ ಅಧ್ಯಕ್ಷ ಪ್ರೇಮ್ ಬಲ್ಲಾಳ್ ಭಾಗ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಕಾರ್ಯದರ್ಶಿಗಳಾದ ರವಿ ಸುಂಕದಕಟ್ಟೆ ಹಾಗೂ ಪ್ರೀತಮ್ ಪಲ್ಲಮಜಲು, ಶಶಿಧರ್ ಕಾಡುಮಠ, ದಲಿತ್ ಸೇವಾ ಸಮಿತಿಯ ಜಿಲ್ಲಾಧ್ಯಕ್ಷ ಗೋಪಾಲ್ ಕೆ. ನೇರಳಕಟ್ಟೆ, ಸಂಜೀವ, ಗುರುಪ್ರಸಾದ್ ಮುಳೂರು, ಗೌತಮ್ ಬಾಕ್ರಬೈಲು, ಗೀತಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರಕರಣವನ್ನು ಬೆಳಕಿಗೆ ತಂದು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯುವಲ್ಲಿ ಪ್ರಜಾಪರ ನ್ಯೂಸ್ ವರದಿ ಪ್ರಮುಖ ಪಾತ್ರ ವಹಿಸಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಉದ್ಯಾನವನದ ಜಾಗದ ಮೇಲೆ ಸರ್ಕಾರದ ಹೊಸ ಕಣ್ಣು? ಶೇ.5ರಷ್ಟು ಬಳಕೆಗೆ ಅನುಮತಿ

Web Add
Prajapara News Kannada

Discover more from Prajapara News

Subscribe now to keep reading and get access to the full archive.

Continue reading