Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆಎಳೆಯ ಮನಸುಗಳಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ: ಸಿ. ಅರ್ಪಿತಾಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಂಚಲನ: ಉದ್ಧವ್ ಠಾಕ್ರೆ ಬಣಕ್ಕೆ ಮತ್ತೊಂದು ಆಘಾತ?ಸರ್ಕಾರಿ ನೌಕರರಿಗೆ ಸೌಲಭ್ಯಗಳು ಹೆಚ್ಚುತ್ತಿವೆ; ಆದರೆ ಸರ್ಕಾರಿ ಸಂಸ್ಥೆಗಳ ಭವಿಷ್ಯ ಏನು?ರೈತರಿಗೆ, ಜಾಗೃತಿಯೇ ಅಂತಿಮ ಗುರಾಣಿಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ಒಪ್ಪಂದ ರದ್ದುಪಡಿಸಿ: ಸಿಪಿಐಎಂ ಆಗ್ರಹಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಪೋಸ್ಟ್: ಮಂಗಳೂರಿನಲ್ಲಿ FIR ದಾಖಲುಮೋದಿ ಸರ್ಕಾರದ ನೀತಿಗಳಿಂದ ಕಾರ್ಮಿಕ ವರ್ಗದ ಬದುಕು ವಿನಾಶದತ್ತ: ಸುಕುಮಾರ್ ತೊಕ್ಕೋಟು • 🔥
Advertisement

2028ರ ಚುನಾವಣೆಯಲ್ಲಿ ರಮಾನಾಥ ರೈ ಮತ್ತೆ ಅಭ್ಯರ್ಥಿಯಾಗಲಿದ್ದಾರೆ : ಸಿದ್ದರಾಮಯ್ಯ

2028ರ ಚುನಾವಣೆಯಲ್ಲಿ ರಮಾನಾಥ ರೈ ಮತ್ತೆ ಅಭ್ಯರ್ಥಿಯಾಗಲಿದ್ದಾರೆ : ಸಿದ್ದರಾಮಯ್ಯ

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಮಾಜಿ ಸಚಿವ ರಮಾನಾಥ ರೈ ಅವರು ಕರಾವಳಿ ಭಾಗದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ನಾಯಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಂಟ್ವಾಳದ ಮೂಡುರು–ಪಡೂರು ಜೊಡುಕರೆ ಕಂಬಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಮಾನಾಥ್ ರೈ ಅವರನ್ನು ಜನತೆ ಸೋಲಿಸಿದ್ದು ಅನ್ಯಾಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕರಾವಳಿ ಭಾಗದ ಅಭಿವೃದ್ಧಿಗೆ ರಮಾನಾಥ್ ರೈ ಅವರು ಸುಮಾರು ₹5000 ಕೋಟಿಗೂ ಹೆಚ್ಚು ಅನುದಾನ ತಂದು ಹಲವು ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಿದ್ದರು. ಅವರ ಅವಧಿಯನ್ನು“ಸುವರ್ಣಯುಗ” ಎಂದೇ ಕರೆಯಲಾಗುತ್ತದೆ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಸಂಡೇ ಬಜಾರ್ ವ್ಯಾಪಾರಿಗಳಿಗೆ ಮುಕ್ತ ಅವಕಾಶ ನೀಡದಿದ್ದರೆ ಹೋರಾಟ ತೀವ್ರ: ಮುನೀರ್ ಕಾಟಿಪಳ್ಳ ಎಚ್ಚರಿಕೆ

ರಮಾನಾಥ್ ರೈ ಅವರು ಬಂಟ್ವಾಳ ಕ್ಷೇತ್ರಕ್ಕೆ ಅಪಾರ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ರಸ್ತೆ, ಮೂಲಸೌಕರ್ಯ, ಶಿಕ್ಷಣ ಮತ್ತು ಇತರ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ತಂದಿದ್ದಾರೆ. ಇಂತಹ ನಾಯಕನಿಗೆ ಜನತೆ ನೀಡಿದ ಸೋಲು ನ್ಯಾಯಸಮ್ಮತವಲ್ಲ,” ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ ಅವರು ಮುಂದಿನ 2028ರ ಚುನಾವಣೆಯಲ್ಲಿ ರಮಾನಾಥ್ ರೈ ಮತ್ತೆ ಅಭ್ಯರ್ಥಿಯಾಗಲಿದ್ದಾರೆ ಎಂಬ ಸೂಚನೆಯನ್ನೂ ನೀಡಿದರು. “ಜನರ ಬೆಂಬಲ ಇದ್ದರೆ ಅವರು ಮತ್ತೆ ರಾಜಕೀಯವಾಗಿ ಮುನ್ನಡೆಯುತ್ತಾರೆ,” ಎಂದು ಹೇಳಿದರು.

ಬಂಟ್ವಾಳದ ಸಂಪ್ರದಾಯಿಕ ಕ್ರೀಡೆಯಾದ ಕಂಬಳ ಕರಾವಳಿ ಸಂಸ್ಕೃತಿಯ ಹೆಮ್ಮೆಯ ಸಂಕೇತವಾಗಿದ್ದು, ರಾಜ್ಯ ಸರ್ಕಾರ ಕಂಬಳಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಸಿಎಂ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.

😀
0
😍
0
😢
0
😡
0
👍
1
👎
0

Web Add
Prajapara News Kannada