ಮಂಗಳೂರು: ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ದಕ್ಷಿಣ ಕನ್ನಡ ಜಿಲ್ಲಾ ಸಮಾವೇಶವು ನಗರದ ಡಾನ್ ಬಾಸ್ಕೋ ಹಾಲ್ನಲ್ಲಿ ಬಿ.ಕೆ. ಇನಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಾವೇಶದಲ್ಲಿ ನೂತನ ಜಿಲ್ಲಾ ಸಮಿತಿಯನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಜಿಲ್ಲೆಯ ಜನಪದ ವಿದ್ವಾಂಸರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಸಮಾವೇಶವನ್ನು ಉದ್ಘಾಟಿಸಿದರು. ಎಸ್ಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷ ಶಿವಪ್ಪ ಅಂಬಳಿಕಲ್ ಅವರು ಸಮಾವೇಶವು ಸುಸೂತ್ರವಾಗಿ ನಡೆಯುವಂತೆ ಮಾರ್ಗದರ್ಶನ ನೀಡಿದರು.
ಸಮಾವೇಶದಲ್ಲಿ ಮುಂದಿನ ಸಾಲಿನ ಎಸ್ಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಲಾಗಿದ್ದು, ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಅಜ್ಲಾನ್ ಬೆಂಗ್ರೆ ಹಾಗೂ ಜಿಲ್ಲಾ ಕಾರ್ಯದರ್ಶಿಯಾಗಿ ವಿನಾಯಕ ಮಂಗಳೂರು ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ನೂತನ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾಗಿ ಲಿಖಿತ್ ವಾಮಂಜೂರು, ಅಲ್ಮಾಸ್, ರೋನ್ ಸನ್ ಡಿಸೋಜ, ಅವಿಶಾ ಡಿಸೋಜ (ಪಂಜಿಮೊಗರು), ಸಮನ್ವಿ ಬಜಾಲ್, ಪ್ರೇಮ್ ಮದ್ಯ ಮತ್ತು ಮಿನಹಾಜ್ ದೇರಳಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.
ಸಹ ಕಾರ್ಯದರ್ಶಿಗಳಾಗಿ ಚಿರಾಗ್ ಕುತ್ತಾರ್, ಇಶಾನ್, ಶ್ರಮಾ, ಇಂಚರಾ ಎಸ್. ಬಜಾಲ್, ಸನನ್ವಿ ಬಜಾಲ್, ನೋಯಲ್ ಸ್ಟೀಫನ್ ಡಿಸೋಜ, ಶಯಾನ್ ಹಾಗೂ ರಂಜಿತ್ ಕೊಯ್ಯೂರು ಅವರನ್ನು ಆಯ್ಕೆ ಮಾಡಲಾಗಿದೆ.
ಇದಲ್ಲದೆ, ಜಿಲ್ಲೆಯ ವಿವಿಧ ಕಾಲೇಜುಗಳಿಂದ ಒಟ್ಟು 35 ಮಂದಿಯನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ.
ಸಮಾವೇಶದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳು, ಶಿಕ್ಷಣ ಕ್ಷೇತ್ರದ ಸವಾಲುಗಳು ಹಾಗೂ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ನೂತನ ಸಮಿತಿಯು ಜಿಲ್ಲೆಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಜೊತೆಗೆ ವಿದ್ಯಾರ್ಥಿ ಹೋರಾಟಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪ ವ್ಯಕ್ತಪಡಿಸಿತು.