Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿFACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ • 🔥
Advertisement

ಜಾತಿ ಸಂಸ್ಕೃತಿಯೇ? ಮೀಸಲಾತಿ ಅನ್ಯಾಯವೇ?

ಜಾತಿ ಸಂಸ್ಕೃತಿಯೇ? ಮೀಸಲಾತಿ ಅನ್ಯಾಯವೇ?

ಜಾತಿ ಪದ್ಧತಿ ಮತ್ತು ಜಾತೀಯತೆ ಎಂಬುದು ಭಾರತದ ಸಾಮಾಜಿಕ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಸತ್ಯ. ಒಂದು ಕಾಲದಲ್ಲಿ ಭಾರತದಲ್ಲಿ ಮನುಸ್ಮೃತಿ ಎಂಬ ವ್ಯವಸ್ಥೆ ಪ್ರಾಬಲ್ಯದಲ್ಲಿದ್ದಾಗ, ಅದು “ಕಾನೂನು” ಎಂಬ ಅರಿವೇ ಇಲ್ಲದ ಸಾಮಾನ್ಯ ಜನರು ಅದರ ಮಧ್ಯೆಯೇ ತಮ್ಮ ಬದುಕನ್ನು ಸಾಗಿಸಿದ್ದರು. ಮನುಸ್ಮೃತಿ ಎಂದರೇನು, ಅದು ಯಾರಿಗಾಗಿ, ಯಾರ ವಿರುದ್ಧ ಎಂಬ ಜ್ಞಾನವನ್ನು ಪಡೆಯುವ ಅವಕಾಶವೇ ಬಹುಜನರಿಗೆ ಇರಲಿಲ್ಲ. ಕಾರಣ, ಅದೇ ವ್ಯವಸ್ಥೆ ಅವರಿಗೆ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡಿತ್ತು.

ಮನುಸ್ಮೃತಿ ಕೇವಲ ಧಾರ್ಮಿಕ ಗ್ರಂಥವಲ್ಲ; ಅದು ಸಮಾಜವನ್ನು ಶ್ರೇಣೀಕರಿಸಿ, ಜನರ ಕಸುಬನ್ನು ಜಾತಿಯಾಗಿ ಪರಿವರ್ತಿಸಿ, ಒಂದಾಗಿ ಬದುಕುತ್ತಿದ್ದ ಭಾರತೀಯರನ್ನು ಶಾಶ್ವತವಾಗಿ ವಿಭಜಿಸಿದ ವ್ಯವಸ್ಥೆಯಾಗಿತ್ತು. ಜನ್ಮದ ಆಧಾರದ ಮೇಲೆ ಮಾನವನ ಮೌಲ್ಯ ನಿರ್ಧಾರವಾಗುತ್ತಿತ್ತು. ಇದು ಸಹಜ ಸಾಮಾಜಿಕ ವ್ಯವಸ್ಥೆಯಲ್ಲ, ಒಂದು ನಿರ್ದಿಷ್ಟ ವರ್ಗದ ಅಧಿಕಾರ ಮತ್ತು ಪ್ರಭುತ್ವವನ್ನು ಕಾಪಾಡುವ ವ್ಯವಸ್ಥೆಯಾಗಿತ್ತು ಎಂಬುದು ಐತಿಹಾಸಿಕ ಸತ್ಯ.

ಈ ಜಾತಿ ಪದ್ಧತಿಯಿಂದ ಲಾಭ ಪಡೆದವರು ಯಾರು ಎಂಬುದನ್ನು ಇಲ್ಲಿ ವಿವರಿಸುವ ಅಗತ್ಯವೇ ಇಲ್ಲ. ಇತಿಹಾಸವೇ ಅದಕ್ಕೆ ಸಾಕ್ಷಿ. ಆದರೆ ಅದೇ ಜಾತಿ ಪದ್ಧತಿಯನ್ನು ಒಂದು ಅಸ್ತ್ರವಾಗಿ ಬಳಸಿಕೊಂಡು, ಡಾ. ಬಿ.ಆರ್. ಅಂಬೇಡ್ಕರ್ ಅವರು ಜಾತಿ ಆಧಾರಿತ ಮೀಸಲಾತಿಯನ್ನು ಜಾರಿಗೆ ತಂದು ಸಮಾಜದಲ್ಲಿ ಮಹತ್ವದ ಸುಧಾರಣೆಗೆ ದಾರಿ ಮಾಡಿಕೊಟ್ಟರು. ಅಂಬೇಡ್ಕರ್ ಅವರು ಜಾತಿಯನ್ನು ಸೃಷ್ಟಿಸಲಿಲ್ಲ; ಜಾತಿಯಿಂದ ನೊಂದವರಿಗೆ ನ್ಯಾಯ ಒದಗಿಸುವ ಸಾಧನವಾಗಿ ಜಾತಿಯನ್ನು ಬಳಸಿದರು.

ಇದನ್ನೂ ಓದಿ: ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ

ಒಂದು ಕಾಲದಲ್ಲಿ ಜಾತಿ ಪದ್ಧತಿ ಒಂದು ವರ್ಗಕ್ಕೆ ಪೂರಕವಾಗಿದ್ದಾಗ, ಅನುಕೂಲಕರವಾಗಿದ್ದಾಗ, ಅದನ್ನೇ ಉಳಿಸಿಕೊಂಡು, ಮೆರೆಸಿಕೊಂಡು, ಪೋಷಿಸಿಕೊಂಡು ಬಂದ ಅದೇ ವರ್ಗ ಇಂದು ಜಾತಿ ಆಧಾರಿತ ಮೀಸಲಾತಿಯನ್ನು ವಿರೋಧಿಸುತ್ತಿರುವುದು ದೊಡ್ಡ ವೈರುಧ್ಯ. ಕಾರಣ ಏನು? ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನವು ಜಾತಿ ಪದ್ಧತಿಯನ್ನು ನಿರ್ಮಿಸಿದವರ ಬೇರುಗಳನ್ನೇ ಪ್ರಶ್ನಿಸಿತು. ಜನ್ಮಸಿದ್ಧ ಅಧಿಕಾರವನ್ನು ಹಕ್ಕು ಎಂದು ಒಪ್ಪಲಿಲ್ಲ. ಅದಕ್ಕಾಗಿಯೇ ಅದು ಕೆಲವರಿಗೆ “ಅಸಹನೀಯ” ಆಯಿತು.

ಇಂದಿನ ಮಾಧ್ಯಮ ಚರ್ಚೆಗಳಲ್ಲಿ ಜಾತಿ ಎಂಬ ಪದವನ್ನು ಉಚ್ಚರಿಸಿದರೆ ಸಾಕು, ಎಲ್ಲರಿಗೂ ಬೆಂಕಿ ಹಚ್ಚಿದಂತೆ ವರ್ತನೆ ಮಾಡಲಾಗುತ್ತದೆ. ಜಾತಿಯನ್ನು ಬೆಳೆಸಬೇಕು ಎಂಬುದೂ ತಪ್ಪೇ, ಅದರಲ್ಲಿ ಸಂಶಯವಿಲ್ಲ. ಆದರೆ ಜಾತಿಯನ್ನು ಹಿಂದುಳಿದ ಸಮುದಾಯಗಳ ಸಾಮಾಜಿಕ–ಆರ್ಥಿಕ ಏಳಿಗೆಗೆ ಬಳಸುವುದು ತಪ್ಪಲ್ಲ; ಅದು ಅಗತ್ಯ. ಇದೇ ಸಂದರ್ಭದಲ್ಲಿ, ಜಾತಿಯನ್ನು ಪ್ರತಿಪಾದಿಸಿಕೊಂಡು ಬಂದವರೇ “ಜಾತಿ ಸರಿಯಲ್ಲ” ಎಂದು ಹೇಳುವುದು ನೈತಿಕವಾಗಿ ತಪ್ಪು.

ಇನ್ನೊಂದು ಗಂಭೀರ ಸಮಸ್ಯೆ ಎಂದರೆ, ಜಾತಿ ಹೆಸರಿನಲ್ಲಿ ಸಂಘಟನೆಗಳನ್ನು ಕಟ್ಟಿಕೊಂಡು, ಆ ಸಮುದಾಯದ ಜನರ ನಿಜವಾದ ಆರ್ಥಿಕ ಮತ್ತು ಸಾಮಾಜಿಕ ಸುಧಾರಣೆಯ ಕಡೆ ಗಮನ ಕೊಡದೆ, ಅವರಿಂದ ವಂತಿಗೆ, ದೇಣಿಗೆ ಸಂಗ್ರಹಿಸಿ ಸ್ವಂತ ಬೆಳವಣಿಗೆಗಾಗಿ ಜಾತಿ ಹೆಸರನ್ನು ಬಳಸಿಕೊಳ್ಳುವುದು. ಇದು ಜಾತಿ ವಿರುದ್ಧದ ಹೋರಾಟವಲ್ಲ; ಜಾತಿಯ ದುರುಪಯೋಗ.

ಮೀಸಲಾತಿ ಎಂದರೆ ಶಾಶ್ವತ ರಾಜಕೀಯ ಅಸ್ತ್ರವಲ್ಲ. ಅದು ತಾತ್ಕಾಲಿಕ ಸಾಮಾಜಿಕ ಚಿಕಿತ್ಸೆ. ಸಮಾಜ ಸಮಾನತೆ ಸಾಧಿಸುವವರೆಗೂ ಅವಶ್ಯಕವಾದ ಒಂದು ಸಂವಿಧಾನಾತ್ಮಕ ಉಪಕರಣ. ಗುರಿ ಜಾತಿಯನ್ನು ಉಳಿಸುವುದಲ್ಲ; ಜಾತಿಯ ಅಗತ್ಯವನ್ನೇ ಕೊನೆಗಾಣಿಸುವುದು.

ಇದನ್ನೂ ಓದಿ: ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನ ಜಾತಿಯನ್ನು ರಕ್ಷಿಸಲು ಬರೆಯಲ್ಪಟ್ಟಿಲ್ಲ. ಅದು ಮಾನವ ಘನತೆಯನ್ನು ರಕ್ಷಿಸಲು, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವವನ್ನು ಸ್ಥಾಪಿಸಲು ರೂಪುಗೊಂಡ ಮಹಾ ದಸ್ತಾವೇಜು. ಅದನ್ನು ಅರ್ಥಮಾಡಿಕೊಂಡರೆ, ಜಾತಿಯ ಕುರಿತು ನಡೆಯುವ ಇಂದಿನ ಗದ್ದಲಗಳ ನಿಜವಾದ ಮುಖ ನಮಗೆ ಸ್ಪಷ್ಟವಾಗುತ್ತದೆ.

😀
0
😍
0
😢
0
😡
0
👍
1
👎
0

Web Add
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಅಧಿಕಾರಿಗಳ ನಿರ್ಲಕ್ಷ್ಯ: ದಳವಾಯಿಹಳ್ಳಿಯ ನೀರಿನ ಸಮಸ್ಯೆಗೆ ಸ್ಪಂದಿಸಿ ಮಾನವೀಯತೆ ಮೆರದ ಪ್ರೊ. ಹರಿರಾಮ್
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿನಲ್ಲಿ ಭವ್ಯವಾಗಿ ಆರಂಭವಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’ – ಪರಿಮಳ ಪ್ರಿಯರ ಹೊಸ ಆಕರ್ಷಣೆಯ ಕೇಂದ್ರ
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಮಂಗಳೂರಿಗೆ ಹೊಸ ಪರಿಮಳ ಲೋಕ – ಭವ್ಯ ಉದ್ಘಾಟನೆಗೆ ಸಜ್ಜಾದ ‘ಅಲ್ ನಜಿಮ್ ಅಸ್ ಸಾಕಿಬ್ ಪರ್ಫ್ಯೂಮ್ ಟ್ರೇಡರ್ಸ್’
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಡಿಜಿಟಲ್ ಯುಗದಲ್ಲಿ ಯುವ ಒತ್ತಡ ಮತ್ತು ಮಾನಸಿಕ ಆರೋಗ್ಯ ಕುರಿತು ಸಮ್ಮೇಳನ – ಮಂಗಳೂರಿನಲ್ಲಿ ಯಶಸ್ವಿ ಆಯೋಜನೆ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಯುನೈಟೆಡ್ ಲೊರೆಟ್ಟೊ ಫ್ರೆಂಡ್ಸ್‌ಗೆ ಹೊಸ ಸಾರಥಿ: ಡೊನಾಲ್ಡ್ ನೊರೊನ್ಹಾ ಅಧ್ಯಕ್ಷ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಬೀದಿಬದಿ ವ್ಯಾಪಾರಿಗಳ ವಿರುದ್ಧ ನೈತಿಕ ಪೊಲೀಸ್‌ಗಿರಿ: ಕ್ರಮಕ್ಕೆ ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ ಒತ್ತಾಯ
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಮೋದಿಯವರ ಭಾಷಣ ಮತ್ತು ಟೆಲಿಪ್ರಾಂಪ್ಟರ್ ವಿವಾದ: ವೈರಲ್ ವಿಡಿಯೋದಿಂದ ಹುಟ್ಟಿದ ಪ್ರಶ್ನೆಗಳು
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ಕಲೆಗಳಿಗೆ ವೇದಿಕೆ ಸಿಗಬೇಕೇ ಅಥವಾ ಕಟ್ಟುಪಾಡುಗಳಲ್ಲಿ ಸಿಲುಕಿಕೊಳ್ಳಬೇಕೇ?
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ವಂಶಪಾರಂಪರ್ಯ ರಾಜಕಾರಣ ಮತ್ತು ಪ್ರಜಾಪ್ರಭುತ್ವದ ವೈಫಲ್ಯ!
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಪ್ರಜಾಪರ ನ್ಯೂಸ್ ವರದಿಯ ಫಲಶೃತಿ ; ಸೇಸಮ್ಮರಿಗೆ ಪಾಸ್‌ವರ್ಡ್ ಹಸ್ತಾಂತರ, ಸಮಸ್ಯೆಗೆ ಅಂತ್ಯ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
ಎಚ್ಚರ..! ಮೊಬೈಲ್‌ನಲ್ಲಿ ಈ APK ಆ್ಯಪ್ ಇನ್‌ಸ್ಟಾಲ್ ಮಾಡಿದ್ರೆ OTP ಕಳ್ಳತನ, ಬ್ಯಾಂಕ್ ಖಾತೆ ಖಾಲಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ಇರುವ ಅಜೆಂಡಾ ಏನು? – ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹೊಸ ರಾಜಕೀಯ ವ್ಯಂಗ್ಯ ಚಳವಳಿ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ಬೃಹತ್ ಪ್ರತಿಭಟನೆ
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
ತಾಣ- “ಮನಸ್ಸಿಗಿಂತ ನೆಮ್ಮದಿಯ ತಾಣ ಬೇರೊಂದಿಲ್ಲ.”
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
NEET: ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಅನ್ಯಾಯ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದುಬಾರೆಯಲ್ಲಿ ಆನೆ ಕಾದಾಟದ ದುರಂತ: ಮಹಿಳೆ ಸಾವು – ವನ್ಯಜೀವಿಗಳಿಂದ ಸುರಕ್ಷಿತ ಅಂತರ ಕಾಪಾಡಲು ಸಚಿವ ಈಶ್ವರ ಖಂಡ್ರೆ ಸೂಚನೆ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
ದೇರಳಕಟ್ಟೆ ಆಸ್ಪತ್ರೆ ಜಂಕ್ಷನ್‌ನಲ್ಲಿ ಕೊಳಚೆ ನೀರಿನ ಸಮಸ್ಯೆ : ತಕ್ಷಣ ಕ್ರಮಕ್ಕೆ ಸಿಪಿಐ(ಎಂ) ಆಗ್ರಹ
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
FACT CHECK ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಅಕ್ರಮಿ ಮತಾಂಧರು ಊರು ತೊರೆಯುತ್ತಿದ್ದಾರೆ ವಿಡಿಯೋದ ಅಸಲಿಯತ್ತು ಏನು?
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಭಬನಿಪುರ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಭಾರೀ ಹೊಡೆತ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ಅನಂತಾಡಿ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಜಾತಿ ನಿಂದನೆ ಆರೋಪಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ತಮಿಳುನಾಡು ರಾಜಕೀಯದಲ್ಲಿ ಕಾಂಗ್ರೆಸ್ ನಡೆಗೆ ಟೀಕೆ: ಇಂಡಿಯಾ ಕೂಟದ ಏಕತೆಗೆ ಧಕ್ಕೆಯೇ?
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ಮಂಗಳೂರಿನಲ್ಲಿ ವೈಶಾಖ ಬುದ್ಧ ಪೂರ್ಣಿಮೆ ಅಂಗವಾಗಿ ಪವಿತ್ರ ಬುದ್ಧ ಜಯಂತಿ ಆಚರಣೆ
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ನಾಳೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ.
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ದಕ್ಷಿಣ ಕನ್ನಡದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿದ್ದೆಯೇ ಬಿಎಸ್ಪಿ?
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
ಪೂಜ್ಯ ಧಮ್ಮತಿಸ್ಸ ಭಂತೇಜಿಯವರ ಸಾನ್ನಿಧ್ಯದಲ್ಲಿ ಮಂಗಳೂರಿನಲ್ಲಿ ಧಮ್ಮದೀಪ ಕಾರ್ಯಕ್ರಮ
Prajapara News Kannada