Prajapara News Kannada
🔴 LIVE | About Us | 🌐 login
ಸರ್ವ ಜನರ ಏಕ ಧ್ವನಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪುಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ • 🔥
Advertisement

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೃತದೇಹ ಪತ್ತೆ – ತನಿಖೆ ತೀವ್ರ

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಮೃತದೇಹ ಪತ್ತೆ – ತನಿಖೆ ತೀವ್ರ

ಬೆಳ್ತಂಗಡಿ: ತಾಲ್ಲೂಕಿನ ಗೇರುಕಟ್ಟೆ ಗ್ರಾಮದ ಬರಮೇಲು ಪ್ರದೇಶದಲ್ಲಿ ನಾಪತ್ತೆಯಾಗಿದ್ದ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂಬ ಬಾಲಕನ ಮೃತದೇಹ ಪತ್ತೆಯಾದ ಘಟನೆ ಗ್ರಾಮದಲ್ಲಿ ಶೋಕ ಹಾಗೂ ಆತಂಕ ಮೂಡಿಸಿದೆ. ಕಳಿಯ ಗ್ರಾಮದ ಸಂಚೋಳ್ಳಿ ನಿವಾಸಿ ಸುಬ್ರಹ್ಮಣ್ಯ ನಾಯರ್ ಪುತ್ರನಾದ ಸುಮಂತ್, ಧನು ಪೂಜೆಯ ಹಿನ್ನೆಲೆಯಲ್ಲಿ ನಾಳ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಬುಧವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದನು. ಆದರೆ ಆತ ದೇವಸ್ಥಾನಕ್ಕೂ ತಲುಪದೆ ಮನೆಗೂ ಮರಳದೇ ನಾಪತ್ತೆಯಾಗಿದ್ದನು.

ಇದನ್ನೂ ಓದಿ: ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ

ಕುಟುಂಬಸ್ಥರು ಹಾಗೂ ಸ್ಥಳೀಯರು ಹುಡುಕಾಟ ನಡೆಸಿದ ವೇಳೆ, ಬಾಲಕನ ಮನೆ ಸಮೀಪದ ತೋಟದ ಕೆರೆಯ ಬಳಿ ರಕ್ತದ ಗುರುತುಗಳು ಪತ್ತೆಯಾಗಿದ್ದವು. ವಿಷಯ ತಿಳಿದ ತಕ್ಷಣ ಬೆಳ್ತಂಗಡಿ ಪೊಲೀಸರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರ ಸಹಕಾರದಿಂದ ವ್ಯಾಪಕ ಶೋಧ ಕಾರ್ಯ ಆರಂಭಿಸಲಾಯಿತು. ತಡರಾತ್ರಿ ವರೆಗೆ ಮುಂದುವರಿದ ಶೋಧ ಕಾರ್ಯದ ಫಲವಾಗಿ, ಮನೆಯ ಸಮೀಪದ ಕೆರೆಯಲ್ಲಿ ಸುಮಂತ್‌ನ ಮೃತದೇಹ ಪತ್ತೆಯಾಗಿದೆ.

ಮೃತದೇಹ ಪತ್ತೆಯಾದ ನಂತರ ಪ್ರಕರಣದ ತನಿಖೆಯನ್ನು ಪೊಲೀಸರು ಇನ್ನಷ್ಟು ಚುರುಕುಗೊಳಿಸಿದ್ದಾರೆ. ನವೆಂಬರ್ 14ರ ರಾತ್ರಿ 8.30ರಿಂದ 11.30ರವರೆಗೆ FSL (ವಿಜ್ಞಾನ ಪ್ರಯೋಗಾಲಯ) ತಂಡ ಮತ್ತು ಸುಮಾರು 50ಕ್ಕೂ ಅಧಿಕ ಪೊಲೀಸರ ತಂಡದಿಂದ, ರಕ್ತದ ಕಲೆಗಳು ಕಂಡುಬಂದ ಸ್ಥಳಗಳಲ್ಲಿ ‘ಲೂಮಿನಾಲ್ ಟೆಸ್ಟ್’ ಮೂಲಕ ರಾಸಾಯನಿಕ ಪರೀಕ್ಷೆ ನಡೆಸಲಾಗಿದೆ. ಅಲ್ಲದೆ ತೋಟದ ಕೆರೆಯ ಸುತ್ತಮುತ್ತ ಸಾಕ್ಷ್ಯ ಸಂಗ್ರಹಕ್ಕಾಗಿ ಬೆಳಗ್ಗೆ 7 ಗಂಟೆಯಿಂದ ನಿರಂತರ ಕೂಲಿಂಗ್ ಕಾರ್ಯಾಚರಣೆ ಮುಂದುವರಿದಿದೆ.

ಜನವರಿ 15ರ ಬೆಳಿಗ್ಗೆ ಕೆರೆಯ ನೀರನ್ನು ಪಂಪ್‌ಗಳ ಸಹಾಯದಿಂದ ಹಿಂಗಿಸುವ ಕಾರ್ಯವೂ ಕೈಗೊಳ್ಳಲಾಗಿದೆ. ಈಗಾಗಲೇ ಸುಮಂತ್‌ನ ಮೃತದೇಹವನ್ನು ಮನೆಗೆ ತಲುಪಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಂಗಳೂರಿನ ವೈದ್ಯರು ನಡೆಸಿದ ಶವಪರೀಕ್ಷೆಯಲ್ಲಿ ಬಾಲಕನ ತಲೆಗೆ ಮೂರು ಬಲವಾದ ಗಾಯಗಳ ಗುರುತುಗಳು ಕಂಡುಬಂದಿದ್ದು, ಶ್ವಾಸಕೋಶದಲ್ಲಿ ನೀರಿನ ಅಂಶವೂ ಪತ್ತೆಯಾಗಿದೆ. ಇದರಿಂದ ಸಾವಿನ ಬಗ್ಗೆ ಹಲವು ಸಂಶಯಗಳು ಹುಟ್ಟಿಕೊಂಡಿವೆ.

ಇದನ್ನೂ ಓದಿ: ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ

ಈ ಪ್ರಕರಣದ ತನಿಖೆಯನ್ನು ಬೆಳ್ತಂಗಡಿ ಉಪ ವಿಭಾಗಾಧಿಕಾರಿ ರೋಹಿಣಿ ಸಿ.ಕೆ. ಅವರ ನೇತೃತ್ವದಲ್ಲಿ, ಬೆಳ್ತಂಗಡಿ ಪೊಲೀಸ್ ಇನ್ಸ್ಪೆಕ್ಟರ್ ಸುಬ್ಬಪುರ್‌ ಮಠ ಅವರ ಮಾರ್ಗದರ್ಶನದಲ್ಲಿ ವೇಣೂರು, ಬೆಳ್ತಂಗಡಿ, ಪುಂಜಾಲಕಟ್ಟೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗಳ ತಂಡಗಳು ವಿವಿಧ ಆಯಾಮಗಳಲ್ಲಿ ಮುಂದುವರಿಸುತ್ತಿವೆ.

😀
0
😍
0
😢
0
😡
0
👍
1
👎
0

💬 1 ಪ್ರತಿಕ್ರಿಯೆಗಳು

Web Add
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಮಂಗಳೂರು: ಅಮೇರಿಕನ್ ಯುದ್ಧಕೋರ ನೀತಿ ಖಂಡಿಸಿ ಪ್ರತಿಭಟನೆ
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ಚು. ಆಯೋಗದ ಪತ್ರದಲ್ಲಿ ಕೇರಳ ಬಿಜೆಪಿ  ‘ಸೀಲ್’
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ, ಬರ ಪರಿಸ್ಥಿತಿ, ರೈತರ ಸಮಸ್ಯೆ ಕುರಿತು ತೀವ್ರ ಚರ್ಚೆ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ವಿಶ್ವ ಕೊಂಕಣಿ ಕೇಂದ್ರದಲ್ಲಿ ‘ಪ್ರಸಾದ ಎಸಳು’ ಸಂಪ್ರದಾಯದ ಕುರಿತು ಚರ್ಚಾ ಗೋಷ್ಠಿ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಒಳಮೀಸಲಾತಿ ಜಾರಿಗೆ ವಿಳಂಬ? ಚುನಾವಣೆ ನಂತರ ಅನುಷ್ಠಾನ ಪ್ಲಾನ್‌ — ರಾಜಕೀಯ ಚರ್ಚೆ ತೀವ್ರ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಅಲೇರಿ ಮೂಲಕ್ಷೇತ್ರ ಜೀರ್ಣೋದ್ದಾರಕ್ಕೆ ಅನುದಾನ ಬೇಡಿಕೆ; ವಿಧಾನಸಭೆಯಲ್ಲಿ ಉಮನಾಥ ಕೋಟ್ಯಾನ್ ಪ್ರಸ್ತಾಪ
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್ ತೀರ್ಪು
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಆನ್‌ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡ ಹಿನ್ನೆಲೆ: ಬೀದರ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಮಂಗಳೂರು: ಮಂಜಲ್ಪಾದೆ ಪ್ರದೇಶದಲ್ಲಿ ‘ಭೂತ’ ದಾಳಿ ಎನ್ನಲಾದ ವೈರಲ್ ಫೋಟೋ-ವೀಡಿಯೋಗಳ ಸತ್ಯವೇನು?
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಶೈಕ್ಷಣಿಕ ಅಭಿಯಾನದ ಯಶಸ್ವಿ ಮುಕ್ತಾಯ 6,493 ಕಿ.ಮೀ ಸುದೀರ್ಘ ಪ್ರಯಾಣ – ಗ್ರಾಮೀಣ ವಿದ್ಯಾರ್ಥಿಗಳಿಗೆ ತರಬೇತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಸಾಮ್ರಾಟ್ ಅಶೋಕ ಚಕ್ರವರ್ತಿ: ಭಾರತದ ಆತ್ಮವನ್ನು ರೂಪಿಸಿದ ಮಹಾನ್ ಚಕ್ರವರ್ತಿ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಲೋಕಸಭೆಯಲ್ಲಿ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆ ಪರ-ವಿರೋಧಗಳ ನಡುವೆ ಧ್ವನಿಮತದಿಂದ ಅಂಗೀಕಾರ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಮಂಗಳೂರು: ಹೈಡ್ರೋಜನ್ ಉತ್ಪಾದನಾ ತಂತ್ರಜ್ಞಾನಕ್ಕೆ ಚಾಲನೆ — ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟನೆ
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಇರಾನ್–ಅಮೇರಿಕಾ ಸಂಘರ್ಷ ತೀವ್ರ: ದಾಳಿ ಮುಂದೂಡಿದ ಅಮೇರಿಕಾ, ಮಾತುಕತೆ ಇಲ್ಲ ಎಂದ ಇರಾನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
ಡಿಕೆಸಿಎ ಮಹಿಳಾ ಕ್ರಿಕೆಟ್ ಟೂರ್ನಿ: SACA ಮಂಗಳೂರು ಚಾಂಪಿಯನ್
Prajapara News Kannada